Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ತವರಲ್ಲಿ ಮತ್ತೆ ಟಾಸ್ ಸೋತ ಆರ್ ಸಿಬಿ: ರಾಜಸ್ಥಾನ್ ಬೌಲಿಂಗ್!

    By AIN AuthorApril 24, 2025
    Share
    Facebook Twitter LinkedIn Pinterest Email
    Demo

    ಐಪಿಎಲ್ 2025 ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವು ಆತಿಥೇಯ ತಂಡ ಆರ್‌ಸಿಬಿಗೆ ಅತ್ಯಂತ ಮಹತ್ವದ್ದಾಗಿದೆ ಏಕೆಂದರೆ ಈ ಸೀಸನ್‌ನಲ್ಲಿ ತವರಿನ ಹೊರಗೆ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಈ ತಂಡವು ತನ್ನದೇ ಆದ ನೆಲದಲ್ಲಿ ಪದೇ ಪದೇ ವಿಫಲವಾಗುತ್ತಿದೆ. ಬೆಂಗಳೂರು ತಂಡ ತವರಿನಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋತಿದ್ದು, ಈ ಆವೃತ್ತಿಯಲ್ಲಿ ಇನ್ನೂ ತವರಿನಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯ ರಜತ್​ ಪಡೆಗೆ ಮುಖ್ಯವಾಗಿದೆ.

    ಕೊಡಗು: ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ಇನ್ನಿಲ್ಲ!

    ಮೊದಲಿಗೆ ತವರಲ್ಲೇ ಟಾಸ್ ಸೋಲುತ್ತಿರುವ ರಜತ್ ಅವರು ಇಂದು ಕೂಡ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಸಜ್ಜಾಗಿದ್ದಾರೆ. ಅದರಂತೆ ಟಾಸ್ ಗೆದ್ದಿರುವ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲಿದ್ದಾರೆ.

    2025ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಆದರೆ ಆರ್ ಸಿಬಿಗೆ ತವರು ಮೈದಾನ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣ ಯಾಕೋ ಸವಾಲಾಗಿ ಪರಿಣಮಿಸಿದಂತೆ ಕಾಣುತ್ತಿದೆ. ಬೇರೆ ರಾಜ್ಯಕ್ಕೆ ಹೋಗಿ ಅಲ್ಲಿ ಗೆದ್ದು ಬರುವ ಆರ್ ಸಿಬಿಗೆ ಚಿನ್ನಸ್ವಾಮಿ ಸ್ಟೇಡಿಯಂ ಮಾತ್ರ ಕಬ್ಬಿಣದ ಕಡಲೆಯಾಗಿದೆ.

    ಎಸ್, ಇದುವರೆಗೂ 8 ಪಂದ್ಯಗಳನ್ನು ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, 5 ರಲ್ಲಿ ಗೆಲುವು ದಾಖಲಿಸಿ ಮೂರರಲ್ಲಿ ಸೋಲು ಕಂಡಿದೆ. ಸೋತಿರುವ ಪಂದ್ಯಗಳೆಲ್ಲವೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಂಬುವುದು ಗಮನಾರ್ಹ. ಹೀಗಾಗಿ ಇದುವರೆಗೂ ಚಿನ್ನಸ್ವಾಮಿಯಲ್ಲಿ ಗೆಲುವನ್ನೇ ಕಾಣದ ಆರ್​ಸಿಬಿಗೆ ಇಂದು ಆರ್​ಆರ್ ವಿರುದ್ಧ ಗೆಲ್ಲೋದು ಕೂಡ ಟಫ್ ಚಾಲೆಂಜ್ ಆಗಿದೆ.

    ಎಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7.30ಕ್ಕೆ ಬೆಂಗಳೂರು ಮತ್ತು ರಾಜಸ್ಥಾನ್ ತಂಡಗಳು ಸೆಣಸಾಟ ನಡೆಸಲಿವೆ. ಎರಡೂ ತಂಡಗಳು ಪ್ಲೇ-ಆಫ್ ಕನಸು ಕಾಣುತ್ತಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಪ್ಲೇ-ಆಫ್​ಗೆ ಹೋಗಬೇಕು ಅಂದ್ರೆ ಆರ್​ಸಿಬಿ ಇವತ್ತಿನ ಪಂದ್ಯ ಗೆಲ್ಲಲೇಬೇಕಿದೆ. ಈಗಾಗಲೇ 8 ಪಂದ್ಯಗಳಲ್ಲಿ ಐದು ಗೆದ್ದಿರುವ ಆರ್​ಸಿಬಿ, ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

    ಚಿನ್ನಸ್ವಾಮಿಯಲ್ಲಿ ಮೂರು ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ಮೇಲೆ ಫ್ಯಾನ್ಸ್​ ಕೊಂಚ ಬೇಸರಗೊಂಡಿದ್ದಾರೆ. ತವರು ಮೈದಾನದಲ್ಲಿ ಸಂಪೂರ್ಣ ಬೆಂಬಲ ಸಿಕ್ಕರೂ, ಹೋಂ ಅಡ್ವಾಂಟೇಜ್ ಪಡೆದುಕೊಳ್ಳುವಲ್ಲಿ ಆಟಗಾರರು ಫೇಲ್ ಆಗ್ತಿದ್ದಾರೆ. ಕಠಿಣ ಪರಿಸ್ಥಿಯಲ್ಲೂ ಹೋರಾಡುವ ವಿರಾಟ್ ಕೊಹ್ಲಿ ಮೇಲೆ ಅಭಿಮಾನಿಗಳು ಭರವಸೆ ಇಟ್ಟಿದ್ದು, ಇಂದಾದರೂ ಗೆಲುವು ತಂದುಕೊಡ್ತಾರಾ ಕಾದು ನೋಡಬೇಕಿದೆ.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಟೀಮ್ ಇಂಡಿಯಾ ಕೋಚ್ ಆಗಲು ರೆಡಿ ಇದ್ದಾರಂತೆ ಸೌರವ್ ಗಂಗೂಲಿ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.