ಆರ್ಸಿಬಿ ತಂಡವನ್ನು ಸದಾ ಅಪಹಾಸ್ಯ ಮಾಡುವ ಭಾರತ ಕ್ರಿಕೆಟ್ ತಂಡದ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ನ ಮಾಜಿ ಆಟಗಾರ ಅಂಬಾಟಿ ರಾಯುಡು ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮತ್ತೆ ಗೇಲಿ ಮಾಡಿದ್ದರು. ಇದೀಗ CSK ವಿರುದ್ಧ RCB ಗೆಲ್ಲತ್ತಿದ್ದಂತೆ ತಮ್ಮ ವರಸೆಯನ್ನು ಬದಲಿಸಿದ್ದಾರೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಹೌದು ಪ್ರಮುಖ ಸ್ಪೋರ್ಟ್ಸ್ ವೆಬ್ಸೈಟ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಈ ಬಾರಿಯ ಆರ್ಸಿಬಿ ತಂಡವು ಸ್ವಲ್ಪ ಭಿನ್ನವಾಗಿ ಕಾಣಿಸುತ್ತಿದೆ. ಅದರಲ್ಲೂ ತಂಡ ಅದ್ಭುತವಾಗಿದೆ ಎಂದೆನಿಸುತ್ತಿದೆ ಎಂದಿದ್ದಾರೆ.
ಅಷ್ಟೇ ಅಲ್ಲದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ತುಂಬಾ ವಿಶೇಷವಾಗಿದ್ದು, ಏನೋ ಸಾಧಿಸುವ ಹಂಬಲ ಆರ್ಸಿಬಿ ತಂಡದಲ್ಲಿ ಕಾಣಿಸುತ್ತಿದೆ. ಹೀಗಾಗಿ ಆರ್ಸಿಬಿ ತಂಡದಿಂದ ಈ ವರ್ಷ ಏನಾದರೂ ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.