ದೊಡ್ಡಬಳ್ಳಾಪುರ: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುವ ಐಪಿಎಲ್ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆರ್ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಕಪ್ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ. ವಿವಿಧೆಡೆ ವಿಶೇಷ ಪೂಜೆ ನೆರವೇರಿಸಲಾಗಿದೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಅದರಂತೆ ಆರ್ ಸಿ ಬಿ ಟೀಮ್’ಗೆ ಸಪೋರ್ಟ್ ಮಾಡುವಂತೆ ಗ್ರಾಮಸ್ಥರು ಡಂಗೂರ ಸಾರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೀದಿ ಬೀದಿಗಳಲ್ಲಿ ತಮಟೆ ಹೊಡೆದು ಆರ್ ಸಿ ಬಿ ಟೀಮ್ ಗೆ ಸಪೋರ್ಟ್ ಮಾಡಲು ಮನವಿ ಮಾಡಿದ್ದಾರೆ. ಅದಲ್ಲದೆ ಗ್ರಾಮದ ಯುವಕರು ಪಂದ್ಯ ವೀಕ್ಷಣೆ ಗೆ ಎಲ್ ಇ ಡಿ ಸ್ಕ್ರೀನ್ ವ್ಯವಸ್ಥೆ ಮಾಡಿದ್ದು, ಫೈನಲ್ ಪಂದ್ಯ ವೀಕ್ಷಣೆ ಮಾಡಲು ಗ್ರಾಮದ ಜನರು ಕಾತುರದಿಂದ ಕಾಯುತ್ತಿದ್ದಾರೆ.