ಮೈಸೂರು: ಮುಖ್ಯಮಂತ್ರಿ ಬದಲಾವಣೆ ಮಾತು ಕೇಳಿ ಬರ್ತಿದ್ದಂತೆ, ಇತ್ತ ಬದಲಾವಣೆಯ ಮಾತೇ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,
ಮುಖ್ಯಮಂತ್ರಿ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಅವರೇ ಮುಖ್ಯಮಂತ್ರಿ ಎಂದಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿಯೇ ಮುಂದುವರಿಯುತ್ತಾರೆ. 5 ವರ್ಷ ಕೂಡ ಅವರೇ ಸಿಎಂ ಎಂದ್ರು. ಅಲ್ಲದೇ ಈ ಬಗ್ಗೆ ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ನಿನ್ನೆ ಕೂಡ ಈ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ನಡೆದಾಗ ಯಾವುದೇ ಕ್ರಮ ಆಗಿಲ್ಲ. ನಾವು ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಿದ್ದೇವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಆದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಂದರೆ ಉತ್ತರ ಪ್ರದೇಶದ ಕುಂಭಮೇಳ ಹಾಗೂ ಬಿಜೆಪಿ ಮಿತ್ರ ಪಕ್ಷವಿರುವ ತಿರುಪತಿಯಲ್ಲಿ ನಡೆದ ಘಟನೆಗಳ ಬಗ್ಗೆ ಯಾವುದೇ ಕ್ರಮ ಆಗಿಲ್ಲ. ಅಲ್ಲಿ ಯಾರು ರಾಜೀನಾಮೆ ತೆಗೆದುಕೊಂಡಿಲ್ಲ. ಇದು ಬರೀ ಅಪಪ್ರಚಾರದ ರಾಜಕೀಯ ಮಾಡುತ್ತಿದ್ದಾರೆ. ಈ ಘಟನೆ ನಡೆಯಬಾರದಿತ್ತು, ತಪ್ಪಿತಸ್ಥರ ವಿರುದ್ಧ ಸಿಎಂ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.