ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆತಂಕದ ವಾತಾವರಣದಿಂದ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕ ಹಾಗೂ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಪ್ರತಿಕ್ರಿಯೇ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆಯ ಏರಿಕೆಯು ಆರ್ಥಿಕ ಅಸ್ಥಿರತೆಯನ್ನು ಉಂಟುಮಾಡಿದ್ದು, ಇದು ಚಿನ್ನದ ಬೆಲೆಯ ಏರಿಕೆಗೆ ಪ್ರಮುಖ ಕಾರಣವಾಗಿದೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಯುದ್ಧದ ತೀವ್ರತೆ ಕಡಿಮೆಯಾದರೆ ಬೆಲೆ ಸ್ಥಿರಗೊಳ್ಳಬಹುದು,
ಆದರೆ ಈಗಿನ ಪರಿಸ್ಥಿತಿಯಲ್ಲಿ ಏರಿಕೆಯ ಒತ್ತಡ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಇರಾನ್ ಮತ್ತು ಇಸ್ರೇಲ್ ಯುದ್ಧ ಹೀಗೆ ಬಂಗಾರದ ದರದ ಮೇಲೆ ಭಾರೀ ಪರಿಣಾಮ ಬೀರಲಿದೆ. ಈ ಯುದ್ಧ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬಂಗಾರದ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸಂಬಂಧಿಸಿದಂತೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕ ಹಾಗೂ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಹೇಳಿದರು.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 93,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 93,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿಯಲ್ಲಿ ಇದೆ.