ಮಂಡ್ಯ: ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ ಎಂದು ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಈಗ ನೀವು ಅಧಿಕಾರದಲ್ಲಿ ಇದ್ದೀರಿ. ಕೆಲಸ ಮಾಡಿ ಜನರಿಗೆ, ನಮ್ಮ ಮೇಲೆ ಯಾಕೆ ಗೂಬೆ ಕೂರಿಸುತ್ತೀರಿ? ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ.
ಜನರಿಗೆ ಸೈಟ್ ಕೊಡಲಿ, ಕೇವಲ ಮಾತಾಗಿ ಉಳಿಯುವುದು ಬೇಡ. ಕಡತಗಳಲ್ಲಿ ಮಾಡಲಿ, ಮಾತಿನಂತೆ ನಡೆದುಕೊಳ್ಳಲಿ ಎಂದರು. ಇನ್ನೂ ಜ್ಯದ ಉಪ ಮುಖ್ಯಮಂತ್ರಿಯಾಗಿ ರಾಜಕೀಯ ಹೇಳಿಕಗಳನ್ನು ನೀಡುವ ಅನಿವಾರ್ಯತೆ ಅವರಿಗಿದೆ, ಅದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ,
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಅದರೆ 1994 ರಿಂದ ಇಲ್ಲಿಯವರೆಗೆ ಮೂರು ದಶಕಗಳ ಅವಧಿಯಲ್ಲಿ ರಾಮನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಏನು ಕಾಣಿಕೆ ನೀಡಿದ್ದಾರೆ ಅಂತ ಜನರಿಗೆ ಗೊತ್ತಿದೆ, ಹಾಗಾಗಿ ಶಿವಕುಮಾರ್ ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.