ಬೆಂಗಳೂರು: ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಮನಗರವನ್ನ ಬೆಂಗಳೂರು ದಕ್ಷಿಣ ಅಂತ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಿದ್ದಾರೆ.
ತುಮಕೂರು ಬೆಂಗಳೂರಿಗೆ 70 ಕಿಮೀ ದೂರ ಇರೋದು. ನಮ್ಮನ್ನು ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ. ಹೀಗಾಗಿ ಗ್ರೇಟರ್ ಬೆಂಗಳೂರಿಗೆ ನಮ್ಮನ್ನ ಸೇರಿಸಬೇಕು ಅಂತ ನಾವು ಪ್ರಸ್ತಾವನೆ ಕೊಡ್ತೀವಿ ಎಂದು ಹೇಳಿದರು.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ಇದೇ ವೇಳೆ ಕೇಂದ್ರ ಸಚಿವ ಸೋಮಣ್ಣರನ್ನ ಭೇಟಿಯಾಗಿದ್ದ ಬಗ್ಗೆ ಮಾಹಿತಿ ನೀಡಿದ್ರು. ತುಮಕೂರು ನ್ಯಾಷನಲ್ ಹೈವೆಯಲ್ಲಿ ತುಮಕೂರು ಪ್ರಾರಂಭದಲ್ಲಿ ಆರ್ಚ್ ಹಾಕಬೇಕು ಅಂತ ಸ್ಮಾರ್ಟ್ ಸಿಟಿಯಲ್ಲಿ ಹಣ ಹೊಂದಿಸಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಆಗಬೇಕು.
ಇದಕ್ಕಾಗಿ ಸೋಮಣ್ಣ ಅವರನ್ನ ಭೇಟಿಯಾಗಿ ಗಡ್ಕರಿ ಅವರಿಗೆ ಮಾತಾಡಿ ಅನುಮತಿ ಕೊಡಿಸೋಕೆ ಕೇಳೋಕೆ ಹೋಗಿದ್ದೆ. ಕುಡಿಯೋ ನೀರಿನ ಅನೇಕ ಯೋಜನೆ ಕೇಂದ್ರ ಸರ್ಕಾರಕ್ಕೆ ಹೋಗಿದೆ. ಅದನ್ನು ಕೊಡಿಸಬೇಕು ಅಂತ ಮನವಿ ಮಾಡಿದ್ದೇನೆ ಎಂದರು.