ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ ಮುಂಬಾಗದಲ್ಲಿ ತೇರದಾಳ ಮತಕ್ಷೇತ್ರದ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಜನ ವಿರೋಧಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ದಲಿತ ಯುವಕನ ಸಾವಿಗೆ ಪೋಲೀಸರ ವೈಫಲ್ಯ ಕಾರಣ – ದಸಂಸ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಆರೋಪ
ಜನೌಷಧಿ ಕೇಂದ್ರ ಬಂದ್ ಮಾಡಿದ ಹಿನ್ನಲೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಿದರು. ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ.
ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಮಾತನಾಡಿದ ಶಾಸಕ ಸಿದ್ದು ಸವದಿ ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಸರ್ಕಾರದ ಯೋಜನೆಯ ವಿರುದ್ದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ, ರಾಮರಾಜ್ಯ ಮಾಡುತ್ತೇನೆ ಎಂದವರು ಇವರು ರಾವಣ ರಾಜ್ಯ ಮಾಡಿದ್ದಾರೆ, ರಾಕ್ಷಸ ರಾಜ್ಯ ಮಾಡಿದ್ದಾರೆ ಎಂದು ಶಾಸಕ ಸಿದ್ದು ಸವದಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಶಕುನಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಹೊಟ್ಟೆ ಮೇಲೆ ಹೊಡೆದು ಬದುಕುತ್ತಿರುವ ಕಾಂಗ್ರೆಸ್ ಈ ರಾಜ್ಯದಲ್ಲಿ ಸೊನ್ನೆ ಆಡಳಿತ ನಡೆಸುತ್ತಿದೆ. ಬರುವ ಚುನಾವಣೆಯಲ್ಲಿ ಜನ ನಿಮ್ಮನ್ನು ತಿರಸ್ಕಾರ ಮಾಡಿ ಮನೆಯಲ್ಲೇ ಕೂಡಿಸುತ್ತಾರೆ ಎಚ್ಚರಿಕೆಯಿಂದ ಇರಿ.
ರಾಜೀವ ಗಾಂಧಿ ಇಂದಿರಾಗಾಂಧಿ ಕಾಂಗ್ರೆಸ್ ಪಕ್ಷ ಗುತ್ತಿಗೆ ತೆಗೆದುಕೊಂಡಿಲ್ಲ ಅವರು ನಮ್ಮ ಭಾರತ ದೇಶದ ಪ್ರಜೆಗಳೇ ಅವರ ಆಡಳಿತದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಆದರೆ ಇಂದು ನೀವು ಇಂದ್ರಾ ಕ್ಯಾಂಟೀನ್ ಹೆಸರಿನಲ್ಲಿ ಅವರ ಭಾವಚಿತ್ರಗಳನ್ನು ಹಾಕಿ ಬಡವರಿಗೆ ಆಹಾರ ಪೂರೈಕೆ ಮಾಡದೇ ಇರುವವರು ನಾಚಿಕೆಗಡಿನ ಸಂಗತಿ ಎಂದು ತೇರದಾಳ ಶಾಸಕ ಸಿದ್ದು ಸವದಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ಇದೇ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರು ಶ್ರೀಶೈಲ ಬಿಳಗಿ.ಧರೇಪ್ಪ ಉಳ್ಳಾಗಡ್ಡಿ.ನಂದು ಗಾಯಕವಾಡ.ಸಂಜಯ ತೇಗ್ಗಿ. ಶಂಕರ ಹುನ್ನೂರ.ಬಾಳಯ್ಯಾ ಪುಜಾರಿ.ಶಂಕರ ಅಂಗಡಿ.ಪ್ರಭು ಮುಧೋಳ. ಸಚಿನ್ ಕೊಡತೆ.ಮಾಹಾವಿರ ಕೋಕ್ಕನೂರ.ಶ್ರೀಮತಿ ವಿದ್ಯಾ ಧವಾಡಿ. ಸವೀತಾ ಹೋಸೂರ.ಭಾರತಿ ಸೋಳ್ಳಕಿ.ಗೌರಿ ಮೀಳ್ಳಿ.ಶಂಕರ ಕುಂಬಾರ.ಪಾಂಡು ಯರಕ್ಕನವ. ಮಾರುತಿ ಗಾಡಿವ್ಡರ. ಯಲ್ಲಪ್ಪ ಕಟಗಿ. ವೈಷ್ಣವಿ ಬಾಗೇವಾಡಿ.ನಿಂಗಪ್ಪಾ ನಾಯಕ.ಬಸವರಾಜ ಮಡಿವಾಳ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ