ಲಕ್ನೋ:- ನನ್ನ ಸ್ಪೋಟಕ ಆಟಕ್ಕೆ ಆರ್ಸಿಬಿಯಲ್ಲಿರುವ ಅಣ್ಣ ಕಾರಣ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.
ನಿಮಗಿದು ಗೊತ್ತಾ!? ಪ್ರತಿಯೊಬ್ಬರೂ ಮೊಳಕೆ ಬರಿಸಿದ ಹೆಸರುಕಾಳನ್ನು ತಿನ್ನಲೇಬೇಕಂತೆ! ಯಾಕೆ?
ಲಕ್ನೋ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಿತೇಶ್ ಶರ್ಮಾ ಗೆಲುವಿನ ಬಳಿಕ ದಿನೇಶ್ ಕಾರ್ತಿಕ್ ಗೆ ಕ್ರೆಡಿಟ್ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಔಟಾದಾಗ ನಾನು ಈ ಬಾರಿ ಆಟ ಆಡಲೇಬೇಕು ಎಂದು ನಿರ್ಧರಿಸಿದೆ. ನನ್ನ ಬಳಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇದೆ ಎಂದು ನನ್ನ ಗುರು, ಮಾರ್ಗದರ್ಶಕ ಡಿಕೆ ಅಣ್ಣ ಹೇಳಿ ಹುರಿದುಂಬಿಸಿದರು. ಅದರಂತೆ ನಾನು ನನ್ನ ಆಟವಾಡಿದೆ ಎಂದು ತಿಳಿಸಿದರು.
ನನಗೆ ಅನಿಸಿಕೆಗಳನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ನಾನು ಆ ರೀತಿಯ ಆಡಿ ಪಂದ್ಯವನ್ನು ಗೆಲ್ಲಿಸಿದ್ದೇನೆ ಎಂದು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಹರ್ಷ ವ್ಯಕ್ತಪಡಿಸಿದರು.
ಎಲ್ಲಾ ಹೊರೆ ನನ್ನ ಮೇಲಿರುವುದರಿಂದ ನನಗೆ ಒತ್ತಡ ಇತ್ತು. ಆದರೆ ನನ್ನೊಂದಿಗೆ ವಿರಾಟ್, ಕೃನಾಲ್, ಭುವಿ ಇದ್ದಾರೆ. ನಾನು ಅವರೊಂದಿಗೆ ಆಡುತ್ತಿದ್ದೇನೆ ಎಂದು ನನಗೆ ಉತ್ಸುಕನಾಗಿದ್ದೇನೆ. ನಾವು ಚೆನ್ನಾಗಿ ಆಡಲು ಪ್ರಯತ್ನಿಸುತ್ತೇವೆ. ಮುಂದಿನ ಪಂದ್ಯದಲ್ಲೂ ಇದೇ ರೀತಿಯ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.