ಚೆನ್ನೈ: ಕಮಲ್ ಹಾಸನ್ ಮೊಂಡು ವಾದ ಮತ್ತೆ ಮುಂದುವರೆದಿದೆ. ನಿನ್ನೆ ಹೈಕೋರ್ಟ್ ಛೀಮಾರಿ ಹಾಕಿದರು ಎಚ್ಚೆತ್ತುಕೊಳ್ಳದ ನಟ ಮತ್ತೊಮ್ಮೆ ಧಿಮಾಕಿನ ಮಾತನಾಡಿದ್ದಾರೆ. ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕಮಲ್, ನನ್ನ ಹೇಳಿಕೆ ಈಗಲೂ ಬದ್ಧನಾಗಿದ್ದೇನೆ. ಮತ್ತೆ ಮತ್ತೆ ಈ ವಿಚಾರದ ಬಗ್ಗೆ ಮಾತನಾಡಲ್ಲ. ನನ್ನ ಸಿನಿಮಾ ಗೆದ್ದೇ ಗೆಲ್ಲಲಿದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.
ಏನಿದು ವಿವಾದ?
ಚೆನ್ನೈನಲ್ಲಿ ನಡೆದ ಥಗ್ ಲೈಫ್ ಸಿನಿಮಾದ ಆಡಿಯೋ ಲಾಂಚ್ ವೇಳೆ ಕಮಲ್ ಹಾಸನ್ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಶಿವಣ್ಣ ವಿಶೇಷ ಅಥಿತಿಯಾಗಿ ಭಾಗವಹಿಸಿದ್ದರು. ಹೀಗಾಗಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕಮಲ್ ಕ್ಷಮೆ ಕೇಳಲೇಬೇಕು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದರು. ಅವರ ಸಿನಿಮಾ ಬ್ಯಾನ್ ಮಾಡುವಂತೆ ಫಿಲ್ಮಂ ಛೇಂಬರ್ ಗೆ ಕನ್ನಡಪರ ಹೋರಾಟಗಾರರು ಹೋರಾಟ ನಡೆಸಿದ್ದರು.
ಹೈಕೋರ್ಟ್ ಮೆಟ್ಟಿಲೇರಿದ ಕಮಲ್!
ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಭದ್ರತೆ ಬೇಕು ಎಂದು ಕಮಲ್ ಹಾಸನ್ ಹೈಕೋರ್ಟ್ ಮೊರೆ ಹೋಗಿದ್ದರು. ಆದ್ರೆ ಕಮಲ್ ಹಾಸನ್ ಗೆ ಕೋರ್ಟ್ ಛೀಮಾರಿ ಹಾಕಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಈ ಕುರಿತು ನಿನ್ನೆ ವಿಚಾರಣೆ ನಡೆಸಿ ಜೂನ್ 10ರ ಒಳಗೆ ಕಮಲ್ ಹಾಸನ್ ಫಿಲಂ ಚೇಂಬರ್ ಜೊತೆಯಲ್ಲಿ ಮಾತುಕತೆ ಮಾಡಿಕೊಂಡು ವಿವಾದ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚಿಸಿದೆ. ಅಲ್ಲಿಯವರೆಗೂ ಕರ್ನಾಟಕದಲ್ಲಿ ಥಗ್ಲೈಫ್ ರಿಲೀಸ್ ಮಾಡದಂತೆ ಸೂಚಿಸಿದೆ.