ಬೆಂಗಳೂರು: ಅಮಾಯಕರ ಬಲಿ ಪಡೆದ ಉಗ್ರರ ವಿರುದ್ಧ ಭಾರತ ಕೊನೆಗೂ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22ರಂದು ಪಹಲ್ಗಾಮ್ನ ಬೈಸರನ್ನಲ್ಲಿ ಅಮಾಯಕ ಹಿಂದೂಗಳ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಪೈಶಾಚಿಕ ದಾಳಿ ನಡೆಸಿ, ಬರೋಬ್ಬರಿ 26 ಮಂದಿಯ ಜೀವವನ್ನು ತೆಗೆದಿದ್ದರು. ಈ ಕೃತ್ಯದ ಬೆನ್ನಲ್ಲೇ ಇಡೀ ದೇಶ ಪಾಕಿಸ್ತಾನದ ಮೇಲೆ ಕೆಂಡ ಕಾರಿತ್ತು. ಅದರಂತೆ ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ.
ನಿಮಗೆ ರಾತ್ರಿ ಮಲಗುವಾಗ ನರ ನೋವು ಬಂದರೆ ನಿರ್ಲಕ್ಷ್ಯ ಬೇಡ, ತಪ್ಪದೇ ಈ 3 ಪರೀಕ್ಷೆಗಳನ್ನು ಮಾಡಿಸಿ!
ಭಾರತದ ಸೇನಾ ಕಾರ್ಯಾಚರಣೆಯಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಯೋಧರಿಗೆ ಹೊಗಳಿಕೆಯ ಮಹಾಪೂರವೇ ಹರಿದುಬರುತ್ತಿದೆ, ಈ ನಡುವೆ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡಿದ್ದು ಮತ್ತೆ ಎಡವಟ್ಟು ಮಾಡಿಕೊಂಡಿದೆ. ʻಆಪರೇಷನ್ ಸಿಂಧೂರʼ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್,
ಮಹಾತ್ಮ ಗಾಂಧಿ ಅವರ ʻಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿʼ ಎಂಬ ಸಂದೇಶವನ್ನು ಹಂಚಿಕೊಂಡಿತ್ತು. ಕಾಂಗ್ರೆಸ್ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಕೆಲವೇ ಕ್ಷಣಗಳಲ್ಲಿ ಎಕ್ಸ್ ಪೋಸ್ಟ್ ಅನ್ನು ಡಿಲೀಟ್ ಮಾಡಿ, ಮತ್ತೊಂದು ಪೋಸ್ಟ್ ಹಂಚಿಕೊಂಡು ಸೇನೆಯನ್ನು ಕೊಂಡಾಡಿದೆ.
The Indian Air Force (IAF), widely recognised as one of the world's strongest air forces gave a befitting reply to the cowardly #PahalgamTerroristAttack
We stand with the govt, we stand with our security forces. #OperationSindoor pic.twitter.com/NnkFjr9MEq
— Karnataka Congress (@INCKarnataka) May 7, 2025
ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದೆಂದು ವ್ಯಾಪಕವಾಗಿ ಗುರುತಿಸಲ್ಪಟ್ಟ ಭಾರತೀಯ ವಾಯುಪಡೆ (IAF) ಹೇಡಿತನದ ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ನೀಡಿದೆ. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆʼ ಎಂದು ಮತ್ತೊಂದು ಪೋಸ್ಟ್ ಅನ್ನು ಕಾಂಗ್ರೆಸ್ ಹಂಚಿಕೊಂಡಿದೆ.