ಕೋಲಾರ:- ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಚುನಾವಣೆಯಲ್ಲಿ ಸ್ಪರ್ದಿಸಿದ್ದ ಮಾಜಿ ಅದ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಜಯಶೀಲರಾಗಿದ್ದಾರೆ.
ನೀವು ನಿತ್ಯ ಮೊಸರು ತಿನ್ನುತ್ತಿದ್ದೀರಾ!? ಹಾಗಿದ್ರೆ ದೇಹದ ಮೇಲಾಗುವ ಪರಿಣಾಮದ ಬಗ್ಗೆ ತಿಳಿಯಿರಿ
ಚುನಾವಣೆಯಲ್ಲಿ ಗೆದ್ದ ಬಳಿಕ ಮಾಧ್ಯಮ ಕ್ಕೆ ಪ್ರತಿಕ್ರಿಯೆ ನೀಡಿದ ಗೋವಿಂದೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಆಕ್ರೋಶ ಹೊರ ಹಾಕಿದರು. ನನ್ನ ಜೀವಕ್ಕೆ ಅಪಾಯವಾದರೆ ಅದಕ್ಕೆರಮೇಶ್ ಕುಮಾರ್ ಕಾರಣ. ರಮೇಶ್ ಕುಮಾರ್ ಏನು ಬೇಕಾದರೂ ಮಾಡಲು ಸಿದ್ದರಿದ್ದಾರೆ. ನನ್ನ ಮನೆಯಲ್ಲಿ ಲೋಕಾಯುಕ್ತ ದಾಳಿಯಾಗಿದ್ದ ಸಂದರ್ಭದಲ್ಲಿ ರಮೇಶ ಕುಮಾರ್ ಹಲವು ಭಾರಿ ಕರೆ ಮಾಡಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಗೆ ಕರೆ ಮಾಡಿದ್ದಾರೆ. ಪದೇ ಪದೇ ಕರೆ ಮಾಡಿ ಸರಿಯಾಗಿ ಹುಡಿಕಿ,ಏನು ಸಿಕ್ಕಿದೆ ಎಂದು ವಿಚಾರಿಸಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಪೋಲಿಸರು ರಕ್ಷಣೆ ನೀಡಿದ್ದಾರೆ. ನನ್ನ ಮೇಲೆ ಲೊಕಾಯುಕ್ತ ದಾಳಿಗೆ ರಮೇಶ್ ಕುಮಾರ್ ಕಾರಣ. ರಾಜಕೀಯ ಶಡ್ಯಂತರ ಮಾಡಿ ನನ್ನ ಸೋಲಿಗೆ ಪ್ರಯತ್ನ ಮಾಡಿದರು.. ಆದರೆ ನಾನು ಗೆದ್ದಿದ್ದೇನೆ. ಪ್ರಾಮಾಣಿಕ ವಾಗಿ ನಾನು ಕಳೆದ ಚುನಾವಣೆಯಲ್ಲಿ ರಮೇಶ್ ಕುಮಾರ್ ಪರ ಕೆಲಸ ಮಾಡಿದ್ದೆ. ಈ ಕುರಿತು ಸಾಯಿಬಾಬ ಬಳಿ ಪ್ರಮಾಣ ಮಾಡುತ್ತೇನೆ. ವೈಯಕ್ತಿಕ ವಾಗಿ ರಮೇಶ್ ಕುಮಾರ್ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ.