ಉತ್ತರ ಕನ್ನಡ : ಸಾವು ಯಾರಿಗೆ ಹೇಗೆ ಬರುವುದೆಂದು ಊಹಿಸಲು ಸಾಧ್ಯವಿಲ್ಲ. ಇದಕ್ಕೆ ಉದಾಹರಣೆ ಶಿರಿಸಿಯಲ್ಲಿ ನಡೆದ ಘಟನೆ. ಕೃಷಿ ಕೆಲಸದಲ್ಲಿ ತೊಡಗಿದ್ದ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಿಂದಾಗಿ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೊಸಬಾಳೆ ನಿವಾಸಿ ಶೋಭಾ ಹೆಗಡೆ ಅವರು ಕಳೆದ ಬುಧವಾರ ಮೃತರಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿ.ಪಂ. ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಧರ್ಮ ಪತ್ನಿಯಾಗಿದ್ದ ಶೋಭಾ ಹೆಗಡೆ ಅವರು ಕೃಷಿ ಕಾರ್ಯದಲ್ಲೂ ತಮ್ಮನ ತಾವು ತೊಡಗಿಸಿಕೊಂಡಿದ್ದರು. ಅವರ ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸ ನಡೆಯುತ್ತಿತ್ತು
ಬೆಂ-ಮೈ ಎಕ್ಸ್ಪ್ರೆಸ್ ಹೈವೇ ಸರ್ವೀಸ್ ರಸ್ತೆಯಲ್ಲಿ ಅಪಘಾತ ; ಮೂವರ ಸಾವು
ಈ ವೇಳೆ ಅಡಿಕೆ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಸೀರೆಯ ಸೆರಗು ಸಿಲುಕಿದ್ದು, ಯಂತ್ರ ತನ್ನತ್ತ ಸೆಳೆದು ಬಿಸಾಕಿದ ಪರಿಣಾಮ ಶೋಭಾ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಈ ಘಟನೆ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.