ಬೆಂಗಳೂರು:– ಯಶವಂತಪುರ SRS ಸಿಗ್ನಲ್ ಬಳಿ ಡಿವೈಡರ್ ಗೆ KSRTC ಬಸ್ ಡಿಕ್ಕಿ ಹೊಡೆದು ಭಾರೀ ಅನಾಹುತ ತಪ್ಪಿರುವ ಘಟನೆ ಜರುಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎ 06 F1205 ನಂಬರ್ ನ ಬಸ್ ಅಪಘಾತಕ್ಕೀಡಾಗಿದೆ.
ಶನಿವಾರ ಈ ಐದು ಕೆಲಸಗಳನ್ನು ಮಾಡಿದ್ರೆ ಶನಿದೋಷ ದೂರವಾಗತ್ತೆ.. ತಪ್ಪದೇ ಮಾಡಿ!
ಸಿಗ್ನಲ್ ಅಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆ ಬಸ್ ಬ್ರೇಕ್ ಫೇಲ್ ಆಗಿ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 42 ಜನ ಪ್ರಯಾಣಿಕರಿದ್ರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲ. ಒಬ್ಬ ಮಹಿಳೆಗೆ ಮಾತ್ರ ಕಾಲಿಗೆ ಗಾಯವಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ.
ಬೆಳಗಿನ ಜಾವ ಸುಮಾರು 3.30 ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತವಾದ ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.