ಚಿತ್ರದುರ್ಗ : ಯುಗಾದಿ ಹಬ್ಬಕ್ಕೆ ಊರಿಗೆ ಬರುತ್ತಿದ್ದ ಕೂಲಿ ಕಾರ್ಮಿಕರು ಇದೀಗ ಮಸಣ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಹೆಗ್ಗೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ಕುಮಾರನಾಯ್ಕ್, ಶಂಕರಿಬಾಯಿ ಮತ್ತು ಶ್ವೇತಾ ಎಂದು ಗುರುತಿಸಲಾಗಿದೆ. ಗಾಯಗೊಂಡ 9 ಜನರ ಹೆಸರು ತಿಳಿದು ಬರಬೇಕಿದೆ. ಮೃತರು ಚಳ್ಳಕೆರೆ ತಾಲೂಕಿನ ತಳಕು ಮೂಲದರಾಗಿದ್ದು, ಬೆಂಗಳೂರಿಗೆ ಕೂಲಿ ಕೆಲಸಕ್ಕೆ ತೆರಳಿದ್ದರು. ಯುಗಾದಿ ಹಬ್ಬಕ್ಕೆ ವಾಪಸ್ ಊರಿಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ.
ಅಂಗಡಿ ಇಡುವ ವಿಚಾರಕ್ಕೆ ಬೀದಿಬದಿ ವ್ಯಾಪಾರಿಗಳ ಜಗಳ ; ಓರ್ವನ ಮೂಗೇ ಕಟ್
ಟಿಟಿ ವಾಹನ ಬೆಂಗಳೂರಿನಿಂದ ಚಳ್ಳಕೆರೆ ತಳುಕಿಗೆ ಬರುತ್ತಿದ್ದಾಗ, ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ಮತ್ತೊಂದು ಗಾಡಿಗೆ ಡಿಕ್ಕಿ ಹೊಡೆದಿದ್ದಾನೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.