Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    By Author AINJune 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ.

    ಜತೆಗೆ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

    ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!

    ಮಂಗಳವಾರ ಈ ಸಂಬಂಧ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ ಎಚ್ ಮುನಿಯಪ್ಪ ಅವರ ಜತೆ ಸುದೀರ್ಘ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದರು. ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಸಚಿವರು, `ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

    ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ’ ಎಂದಿದ್ದಾರೆ.

    ಈಗ ಮಿಕ್ಕಂತೆ ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.

    ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಸಂಬಂಧ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು. ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು.

    ರೈತರ ನೋವು ನಮಗೆ ಅರ್ಥವಾಗುತ್ತದೆ. ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯನವರು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಕುರಿತ ತೀರ್ಮಾನವನ್ನು ಪರಿಶೀಲಿಸುತ್ತೇವೆ ಎಂದಿದ್ದರು. ಈಗ ಆ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದು ಪಾಟೀಲ ನುಡಿದಿದ್ದಾರೆ. ಸಚಿವ ಮುನಿಯಪ್ಪ ಮಾತನಾಡಿ, ರೈತರು ಸರ್ಕಾರದ ತೀರ್ಮಾನವನ್ನು ಗೌರವಿಸಿ, ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

    ಈ ರೀತಿ ರಾಜ್ಯದಲ್ಲಿ ಎಲ್ಲಿಯೂ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು‌ ಎಂದು ಮುನಿಯಪ್ಪ ಹೇಳಿದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಕೆಐಎಡಿಬಿ ಸಿಇಒ ಡಾ.ಮಹೇಶ್, ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಅನುರಾಧ, ಸೇರಿದಂತೆ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

    Demo
    Share. Facebook Twitter LinkedIn Email WhatsApp

    Related Posts

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025

    ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು! ಇಬ್ಬರು ಸ್ಥಳದಲ್ಲೇ ದುರ್ಮರಣ

    June 24, 2025

    ದುಡ್ಡು ತಗೊಂಡು ಮನೆ ಕೊಟ್ಟಿದ್ರೆ ನಾನೇ ರಾಜೀನಾಮೆ ಕೊಡ್ತೀನಿ: ಸಚಿವ ಜಮೀರ್ ಅಹಮದ್

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.