ಇಟಾನಗರ:- ಅರುಣಾಚಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಭಾರೀ ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನವೊಂದು ಕೊಚ್ಚಿಹೋಗಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.
ಅವನೊಬ್ಬ ಅಯೋಗ್ಯ.. ಆತನಿಂದ ಅವಮಾನ ಆಗಿದೆ: ಕಮಲ್ ಹಾಸನ್ ವಿರುದ್ಧ ಮುಖ್ಯಮಂತ್ರಿ ಚಂದ್ರು ಕಿಡಿ!
ಅರುಣಾಚಲ ಪ್ರದೇಶದ ಗೃಹ ಸಚಿವೆ ಮತ್ತು ಸ್ಥಳೀಯ ಶಾಸಕಿ ಮಾಮಾ ನಟುಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಈ ವೇಳೆ, ಮಾರುತಿ ಕಾರು ಸೆಪ್ಪಾ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ಭೂಕುಸಿತ ಸಂಭವಿಸಿದೆ. ಪರಿಣಾಮ ವಾಹನ ಕೊಚ್ಚಿಹೋಗಿದೆ. ವಾಹನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಮೃತರ ಶವವನ್ನು ಹೊರಗೆ ತೆಗೆದಿದ್ದಾರೆ.