ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ದಾವಣಗೆರೆ, ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್ಡಿಎ ಶೈಲ ಸುಭಾಷ್ ತತ್ರಾಣಿ,
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಓ (PDO) ರಾಮಕೃಷ್ಣ, ಉಡುಪಿ ಜಿಲ್ಲೆ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್ ಗಿರೀಶ್ ರಾವ್, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.