ಬೆಂಗಳೂರು ಗ್ರಾಮಾಂತರ:- ಹೆದ್ದಾರಿಯಲ್ಲಿ ಟಮೋಟ ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪ ಜರುಗಿದೆ.
ಕೊಡಗು: ಕೋಕೇರಿ,ನರಿಯಂದಡ ಗ್ರಾಮದ ತೋಟಗಳಲ್ಲೇ ಕಾಡಾನೆಗಳ ವಾಸ್ತವ್ಯ- ಕೃಷಿ ಗಿಡಗಳಿಗೆ ಹಾನಿ!
ಮತ್ತೊಂದು ವಾಹನಕ್ಕೆ ಸೈಡ್ ಕೊಡಲು ಹೋದ ಟಮೋಟ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಟಮೋಟ ಸಂಪೂರ್ಣ ನಾಶವಾಗಿದೆ. ಕೋಲಾರದ ಟಮೋಟ ಮಾರ್ಕೆಟ್ ನಿಂದ ಖರೀದಿ ಮಾಡಿ 24 ಟನ್ ಟಮೋಟ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದಾಗ ಮತ್ತೊಂದು ವಾಹನಕ್ಕೆ ಸೈಡ್ ಬಿಡಲು ಹೋಗಿ ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಸುಮಾರು 15 ಲಕ್ಷ ಮೌಲ್ಯದ ಟಮೋಟ ಸಂಪೂರ್ಣ ನಜ್ಜು ಗುಜ್ಜಾಗಿ ನಾಶವಾಗಿದೆ. ಲಾರಿ ಪಲ್ಟಿಹೊಡೆದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲಿನರ್ ಗೆ ಗಾಯವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.