ಹಾಸನ: ವೇಗವಾಗಿ ಚಲಿಸುತ್ತಿದ್ದ ಲಾರಿಯ ಚಕ್ರಗಳು ಏಕಾ ಏಕಿ ಕಳಚಿಬಿದ್ದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದ ಬಳಿ ನಡೆದಿದೆ. ಲಾರಿ ಟಯರ್ ಗಳು ರಸ್ತೆಯಲ್ಲಿ ಉರುಳುತ್ತಾ ಹೋಗಿ ರಸ್ತೆ ಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು,
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಮಂಗಳೂರನಿಂದ ಬೆಂಗಳೂರು ಕಡೆಗೆ ಟ್ರಕ್ ತೆರಳುತ್ತಿತ್ತು. ಈ ವೇಳೆ, ರಸ್ತೆಯಲ್ಲಿಯೇ ಟ್ರಕ್ ಹಿಂಬದಿಯ ಎರಡೂ ಚಕ್ರಗಳು ಕಳಚಿಕೊಂಡು ವೇಗವಾಗಿ ರಸ್ತೆಯಲ್ಲಿ ಉರುಳುತ್ತಾ ಆಟೋಗೆ ಡಿಕ್ಕಿ ಹೊಡೆದಿವೆ. ಒಂದು ಚಕ್ರ ಆಟೋಗೆ ಡಿಕ್ಕಿ ಹೊಡೆದು ಮುಂದಕ್ಕೆ ಹಾರಿ ರಸ್ತೆ ಬದಿಯ ಬೇಲಿಗೆ ನುಗ್ಗಿದೆ.
ಅದೃಷ್ಟವಶಾತ್ ಈ ಸಂದರ್ಭದಲ್ಲಿ ರಸ್ತೆಯಲ್ಲಿ ಯಾವುದೇ ವಾಹನಗಳು ಇರದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಚಕ್ರಗಳು ಕಳಚಿಕೊಳ್ಳುತ್ತಿದ್ದಂತೆ ಸ್ವಲ್ಪ ದೂರದಲ್ಲೇ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸಿದ್ದಾನೆ. ಚಕ್ರಗಳು ಕಳಚಿಕೊಂಡು ಆಟೋಗೆ ಅಪ್ಪಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವಘಡದಲ್ಲಿ ಹರೀಶ್ ಎಂಬವರಿಗೆ ಸೇರಿದ ಆಟೋ ಸಂಪೂರ್ಣ ಜಖಂಗೊಂಡಿದೆ.