ದಾವಣಗೆರೆ: ತೆಲುಗಿನ ‘ಲಕ್ಕಿ ಭಾಸ್ಕರ್’ ನಿಮಾ ತೆರೆಕಂಡು ಭರ್ಜರಿ ಯಶಸ್ವಿ ಕಂಡಿತ್ತು. ಆ ಚಿತ್ರದಲ್ಲಿ ನಟ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ನಲ್ಲೇ ಹಣವನ್ನು ಕದ್ದು ಬೇರೆಡೆ ಹೂಡಿಕೆ ಮಾಡುವ ಮೂಲಕ ಸಾಕಷ್ಟು ಹಣ ಸಂಪಾದನೆ ಮಾಡುತ್ತಾನೆ. ಒಂದು ಚಿಕ್ಕ ಸುಳಿವು ಕೂಡ ನೀಡದೇ ನಟ ಅದರಿಂದ ಪಾರಾಗುತ್ತಾನೆ. ಇದು ಒಂದು ಚಿತ್ರ. ಆದರೆ ಇಂತಹದೇ ಒಂದು ಘಟನೆ ನಗರದಲ್ಲಿ ನಡೆದಿದ್ದು,
ಆತ ಬ್ಯಾಂಕ್ ಒಂದರಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ. ಆನ್ ಲೈನ್ ಬೆಟ್ಟಿಂಗ್ ಗೋಜಿಗೆ ಬಿದಿದ್ದ ಆತನಿಗೆ ರಾಯಲ್ ಲೈಪ್ ನಡೆಸ ಬೇಕೆಂಬ ಮಹದಾಸೆ ಇಟ್ಟುಕೊಂಡಿದ್ದ. ಕೊನೆಗೆ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿಗೆ ಕನ್ನ ಹಾಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹಾಗಿದ್ದರೇ ಯಾರಾತಾ, ಆತ ಕೆಲಸ ಮಾಡುತ್ತಿದ್ದ ಬ್ಯಾಂಕ್ ಯಾವುದು ಅಂತೀರಾ ಈ ಸ್ಟೋರಿ ನೋಡಿ..
ಈ ಪೋಟೋದಲ್ಲಿರುವ ಈತನ ಹೆಸರು ಸಂಜಯ್.ಟಿ.ಪಿ. ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ನಿಟ್ಟುವಳ್ಳಿಯಲ್ಲಿರುವ ಸಿ.ಎಸ್.ಬಿ ಬ್ಯಾಂಕ್ ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ. ಒಂದು ದಿ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಬ್ಯಾಂಕ್ ಮ್ಯಾನೇಜರ್ ಬ್ಯಾಂಕಿನಲ್ಲಿ ಗ್ರಾಹಕರು ಅಡಮಾನ ಇಟ್ಟಿದ್ದ 1.86 ಕೋಟಿ ಮೌಲ್ಯದ 3 ಕೆಜಿ 157 ಗ್ರಾಂ ಬಂಗಾರದ ಆಭರಣ ಕಳ್ಳತನವಾಗಿದೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಅಷ್ಟೇ ಅಲ್ಲದೇ ಅವುಗಳನ್ನು ದಾವಣಗೆರೆ ನಗರದ ಪೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡಮಾನ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದು, ಇದೀಗ ಕೆಟಿಜೆ ನಗರ ಪೊಲೀಸರು ಅಡಮಾನ ಇಟ್ಟಿದ್ದ 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ…
ವಿವಿಧ ಬ್ಯಾಂಕ್ ಗಳಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡಿದ್ದ. ಆಗಾಗೀ ಸಂಜಯ್ ಮೇಲೆ ಬ್ಯಾಂಕಿನವರಿಗೆ ಸಾಕಷ್ಟು ನಂಬಿಕೆ ಇತ್ತು. ಅದಕ್ಕಾಗಿ ಅವರು ಬ್ಯಾಂಕಿನಲ್ಲಿ ಬಂಗಾರದ ಆಭರಣಗಳನ್ನು ಚೆಕ್ ಮಾಡಲು ಅಕ್ಕಸಾಲಿಗರನ್ನು ಕೂಡ ಇಟ್ಟುಕೊಂಡಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಸಂಜಯ್ ಗ್ರಾಹಕರ ಹೆಸರಿನಲ್ಲಿ ನಕಲಿ ಬಂಗಾರದ ಆಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ಮಂಜೂರು ಕೂಡ ಮಾಡಿ ಕೊಂಡು ಬ್ಯಾಂಕಿನವರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾನೆ.
ಬಿಸಿಎ ಓದಿರುವ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ ಅಷ್ಟೇ ಅಲ್ಲದೇ ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಟವಾಡುತ್ತಿದ್ದ ಸಂಜಯ್ ತಾನು ರಾಯಲ್ ಲೈಪ್ ನಡೆಸ ಬೇಕೆಂದು ಕನಸು ಕಂಡಿದ್ದ. ತಾನು ಕಳ್ಳತನ ಮಾಡಿದ ಹಣವನ್ನೇಲ್ಲಾ ಆನ್ ಲೈನ್ ಬೆಟ್ಟಿಂಗ್ ನಲ್ಲೇ ಸಂಜಯ್ ಕಳೆದಿದ್ದಾನೆ.
ಒಟ್ಟಿನಲ್ಲಿ ಬ್ಯಾಂಕಿನವರು ಇಟ್ಟಿದ್ದ ನಂಬಿಕೆಗೆ ಸಂಜಯ್ ದ್ರೋಹ ಮಾಡಿ ಇದೀಗ ಜೈಲು ಸೇರಿದ್ದು, ಕಷ್ಟ ಎಂದು ಬ್ಯಾಂಕಿನಲ್ಲಿ ಬಂಗಾರ ಅಡವಿಟ್ಟವರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರಲ್ಲದೇ ಕೆಟಿಜೆ ನಗರ ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದಾರೆ..