ಬೆಳಗಾವಿ : ಕುಡಿದ ಮತ್ತಿನಲ್ಲಿ ಅತ್ತಿಗೆಗೆ ಚೂರಿ ಚುಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ನಡೆದಿದೆ. ಸುಜಾತ ಮಂಜುನಾಥ ಚತ್ರಕೋಟಿ (24) ಕೊಲೆಯಾದ ದುರ್ದೈವಿ. ಬಂಗಾರಪ್ಪ ಈರಯ್ಯನ್ನವರ ಕೊಲೆ ಆರೋಪಿಯಾಗಿದ್ದಾನೆ. ಅಕ್ಕ, ತಂಗಿ ಇಬ್ಬರನ್ನು ಚಾಲಕರಿಗೆ ಮದುವೆ ಮಾಡಿಕೊಡಲಾಗಿತ್ತು. ಸುಜಾತ ಮತ್ತು ಆಕೆಯ ತಂಗಿ ಖನಗಾಂವ ಗ್ರಾಮದಲ್ಲಿ ಅಕ್ಕ ಪಕ್ಕದ ಮನೆಯಲ್ಲಿ ವಾಸವಿದ್ದರು..
ಶನಿವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿ ಬಂಗಾರಪ್ಪ ಅತ್ತಿಗೆ ಸುಜಾತಗೆ ಹೊಟ್ಟೆಗೆ ಚೂರಿ ಚುಚ್ಚಿದ್ದಾನೆ. ತಕ್ಷಣವೇ ಗಂಭೀರ ಗಾಯಗೊಂಡ ಸುಜಾತಳನ್ನ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ಸುಜತಾ ಸಾವನ್ನಪ್ಪಿದ್ದಾರೆ.
ಸಾರಿಗೆ ಬಸ್ ನಿಲುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ ಬೀಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಕಣ್ಣೀರು ಹಾಕುತ್ತಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಚೂರಿ ಹಾಕಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.