Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025 RCB vs PBKS: ಪಂದ್ಯ ಶ್ರೇಷ್ಠ ಪ್ರಶಸ್ತಿ ದೇವದತ್ ಪಡಿಕ್ಕಲ್’ಗೆ ಕೊಡಬೇಕಿತ್ತು: ವಿರಾಟ್ ಕೊಹ್ಲಿ

    By Author AINApril 21, 2025
    Share
    Facebook Twitter LinkedIn Pinterest Email
    Demo

    ಇಂಡಿಯನ್ ಪ್ರೀಮಿಯರ್ ಲೀಗ್​ನ 37ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 157 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್​ಗಳ ಗೆಲುವು ದಾಖಲಿಸಿದೆ.

    ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ (Virat Kohli). ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕಿಂಗ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ವಿರಾಟ್ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.

    ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?

    ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಇದು ನಮಗೆ ಬಹಳ ಮುಖ್ಯವಾದ ಪಂದ್ಯವಾಗಿತ್ತು. ಏಕೆಂದರೆ ಪ್ಲೇಆಫ್​ ಅರ್ಹತೆಯ ವಿಷಯದಲ್ಲಿ 2 ಅಂಕಗಳು ಭಾರಿ ವ್ಯತ್ಯಾಸವನ್ನುಂಟುಮಾಡಬಹುದು. ನಾವು ತವರಿನಲ್ಲಿ ಸೋತರೂ, ಹೊರಗಡೆ ಉತ್ತಮ  ಕ್ರಿಕೆಟ್ ಆಡಿದ್ದೇವೆ. ನೀವು ಪಾಯಿಂಟ್ಸ್​ ಟೇಬಲ್​ನಲ್ಲಿ ಎಂಟರಿಂದ ಹತ್ತು ಅಂಕಗಳಿಗೆ ಹೋದಾಗ, ಅದು ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರಿ ವ್ಯತ್ಯಾಸವನ್ನುಂಟು ಮಾಡುತ್ತದೆ.

    ಪ್ರತಿ ಪಂದ್ಯದಲ್ಲೂ 2 ಅಂಕಗಳನ್ನು ಪಡೆಯುವುದು ನಮ್ಮ ಮನಸ್ಥಿತಿಯಾಗಿರಬೇಕು. ನಾನು ನನ್ನ ಬ್ಯಾಟಿಂಗ್​ನಲ್ಲಿ ಇನ್ನಷ್ಟು ವೇಗವನ್ನು ಹೆಚ್ಚಿಸಲು ಬಯಸಿದ್ದೆ. ಆದರೆ ಈ ಹಂತದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಬಿರುಸಿನ ಬ್ಯಾಟಿಂಗ್​ನೊಂದಿಗೆ ರನ್​ ಗತಿಯಲ್ಲಿ ತುಂಬಾ ವ್ಯತ್ಯಾಸವನ್ನು ಉಂಟು ಮಾಡಿದ್ದರು.

    ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯು ದೇವದತ್ ಪಡಿಕ್ಕಲ್​ಗೆ ಕೊಡಬೇಕಿತ್ತು ಎಂಬುದು ನನ್ನ ಭಾವನೆ. ಇದಾಗ್ಯೂ ಈ ಪ್ರಶಸ್ತಿ ನನಗೆ ಕೊಟ್ಟಿದ್ದಾರೆ ಎಂದು ನನಗೆ ತಿಳೀತಿಲ್ಲ. ಈ ಪ್ರಶಸ್ತಿಗೆ ದೇವ್ (ದೇವದತ್ ಪಡಿಕ್ಕಲ್) ಅರ್ಹರಾಗಿದ್ದರು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. 

     

     

    Demo
    Share. Facebook Twitter LinkedIn Email WhatsApp

    Related Posts

    Team India: BCCI ನಾಯಕತ್ವಕ್ಕೆ ಪರಿಗಣಿಸಿದೆ.. ನನಗೆ ಅದು ಬೇಡ.. ಟೆಸ್ಟ್ ಕ್ಯಾಪ್ಟನ್ ಆಫರ್ ಬಗ್ಗೆ ಬುಮ್ರಾ ಹೇಳಿದ್ದೇನು..?

    June 19, 2025

    ಲಂಡನ್’ನಲ್ಲಿರುವ ಕೊಹ್ಲಿ ನಿವಾಸಕ್ಕೆ ಶುಭಮನ್ ಗಿಲ್, ಪಂತ್ ಭೇಟಿ.! ಯಾಕೆ ಗೊತ್ತಾ..?

    June 19, 2025

    Sophie Devine: ವಿಶ್ವಕಪ್ ನಂತರ ವಿದಾಯ.. ಏಕದಿನ ಪಂದ್ಯಗಳಿಂದ ನಿವೃತ್ತಿಯಾಗಲು ಕಿವೀಸ್ ನಾಯಕಿ ನಿರ್ಧಾರ..!

    June 18, 2025

    Smriti Mandhana: ಮಹಿಳೆಯರ ODI ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    June 17, 2025

    Test Matches: 4 ದಿನಗಳ ಟೆಸ್ಟ್’ಗೆ ಐಸಿಸಿ ಸಿದ್ಧ: ಓವರ್’ಗಳನ್ನು 98 ಕ್ಕೆ ಹೆಚ್ಚಿಸುವ ನಿರೀಕ್ಷೆ!

    June 17, 2025

    WTC Celebration: ಟ್ರೋಫಿ ಜೊತೆ ‘ಗನ್ ಸೆಲೆಬ್ರೇಷನ್’: ಬವುಮಾ ವಿಡಿಯೋ ವೈರಲ್..!

    June 16, 2025

    ಕೊಹ್ಲಿ ನನ್ನ ಜೊತೆ ಕೆಲವು ತಿಂಗಳು ಮಾತನಾಡಲಿಲ್ಲ.. ಏಕೆಂದರೆ..! ಹೀಗೆ ಹೇಳಿದ್ದು ಯಾರು ಗೊತ್ತಾ..?

    June 16, 2025

    ಗುಂಡಿಯಲ್ಲಿ ಮೊಸಳೆ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ!

    June 16, 2025

    ICC 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಬಿಡುಗಡೆ: ಯಾರ ವಿರುದ್ಧ ಎಷ್ಟು ಪಂದ್ಯ ಆಡಲಿದೆ ಟೀಂ ಇಂಡಿಯಾ?

    June 15, 2025

    ಭಾರತಕ್ಕೆ ಮರಳಿರುವ ಗೌತಮ್ ಗಂಭೀರ್: ಟೀಮ್ ಇಂಡಿಯಾಗೆ ಹೊಸ ಕೋಚ್ ನೇಮಕ?

    June 15, 2025

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.