ಉತ್ತರಪ್ರದೇಶ: ಬಾಟಲ್ನಲ್ಲಿ ಪೆಟ್ರೋಲ್ ಹಾಕಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶದ ಸಿಕಂದರಾಬಾದ್ ನಲ್ಲಿ ಈ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಬೈಕ್ಗೆ ಪೆಟ್ರೋಲ್ ತುಂಬಿಸಿದ ನಂತರ ಪ್ಲಾಸ್ಟಿಕ್ ಬಾಟಲಿಗೆ ಪೆಟ್ರೋಲ್ ಹಾಕುವಂತೆ ಹೇಳಿದ್ದಾರೆ. ಆದರೆ ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದಾರೆ. ಇದೇ ವಿಚಾರವಾಗಿ ಮ್ಯಾನೇಜರ್ ರಾಜು ಶರ್ಮಾ ಜೊತೆಗೆ ವಾಗ್ವಾದ ನಡೆದಿದ್ದು, ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಉಗ್ರ ರಾಣಾನನ್ನು ಭಾರತಕ್ಕೆ ಎಳೆದು ತಂದ ಎನ್ ಐಎ: ದೆಹಲಯಲ್ಲಿ ಫುಲ್ ಹೈಅಲರ್ಟ್
ಇನ್ನೂ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರ್ಮಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ.