ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಕುಂಚನೊರ ಕಾಂಪ್ಲೆಕ್ಸ್ ದಲ್ಲಿ ಸಂಜೆ ಈ ಘಟನೆ ನಡೆದಿದೆ.. ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದು ಬಟ್ಟೆಗೆ ಬಳಸುವ ಕತ್ತರಿಯಿಂದ ಇರಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಶ್ರೀಧರ್ ಟಿರಕಿ ಗಾಯಗೊಂಡ ಯುವಕ ಆತನನ್ನು ಜಮಖಂಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ವೃತ್ತಿಯಿಂದ ಟೇಲರಆಗಿರುವ ಕುಮಾರ ಬಕರೆ ಆರೋಪಿ ಸಂಜೆ ಇವರಿಬ್ಬರ ನಡುವೆ ಕ್ಷುಲ್ಲಕ ವಿಷಯಕ್ಕೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿ ಕುಮಾರ ಅಂಗಡಿಯಲ್ಲಿದ್ದ ಕತ್ತಲೆಯಿಂದ ಶ್ರೀಧರಗೆ ಇರಿದಿದ್ದಾನೆಂದು ತಿಳಿದು ಬಂದಿದೆ
ಈ ಕುರಿತು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಘಟನೆ ನಡೆದ ಸ್ಥಳಕ್ಕೆ ತೇರದಾಳ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.