ಮಂಡ್ಯ:- 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಡಿ.ಹಲಸಹಳ್ಳಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ರೈತ ಜಗದೀಶ್ ಎಂಬುವರ ಜಮೀನನಲ್ಲಿ ಭಾರೀ ಗಾತ್ರದ ಹೆಬ್ಬಾವು ಇತ್ತು.
ಹೆಬ್ಬಾವು ಕಂಡು ಭಯಭೀತಗೊಂಡ ರೈತ, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ಮಾಹಿತಿ ಆಧರಿಸಿ ಉರಗ ತಜ್ಞ ಜಗದೀಶ್ ಜೊತೆ ಅರಣ್ಯ ಅಧಿಕಾರಿ ಸ್ಥಳಕ್ಕೆ ಬಂದಿದ್ದಾರೆ. ಉರಗ ತಜ್ಞ ಜಗದೀಶ್ ರಿಂದ ಭಾರೀ ಉದ್ದದ ಹೆಬ್ಬಾವು ರಕ್ಷಣೆ ಮಾಡಲಾಗಿದೆ.
ಭಾರೀ ಉದ್ದ ಗಾತ್ರದ ಹೆಬ್ಬಾವು ನೋಡಲು ಜನತೆ ಮುಗಿಬಿದ್ದಿದ್ದಾರೆ. ರಕ್ಷಣೆ ಮಾಡಿದ ಹೆಬ್ಬಾವನ್ನು ಸುರಕ್ಷಿತ ಕಾಡಿಗೆ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.