ಮಂಡ್ಯ:- ಐನಾತಿ ಆಸಾಮಿಯೊಬ್ಬ ತನ್ನ ಜಮೀನಿನಲ್ಲಿ ಅಡಿಕೆ, ಬಾಳೆ, ತೆಂಗು ಜೊತೆಗೆ ಸಾಲು-ಸಾಲಾಗಿ ಗಾಂಜಾ ಬೆಳೆದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾಶಿಮುರುಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ದನಗಳ ಶೆಡ್ಡುಗಳ ನಿರ್ಮಾಣದಲ್ಲಿ ಗೊಂದಲ: ಗ್ರಾ. ಪಂ.ಗೆ ಬಂತು ಎಮ್ಮೆ.! ಆಡಳಿತ ವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ.!
ಬೋರೇಗೌಡ ಎಂಬಾತ ತನ್ನ ಜಮೀನಿನಲ್ಲಿ ಅಡಿಕೆ, ಬಾಳೆ, ತೆಂಗು ಸೇರಿದಂತೆ ವಿವಿಧ ಬೆಳೆ ಬೆಳೆದಿದ್ದ. ಇದರ ಜೊತೆಯಲ್ಲೇ ಇದರ ಜೊತೆಯಲ್ಲೇ ಗಾಂಜಾ ಗಿಡಗಳನ್ನು ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕ ನಾಗಭೂಷಣ್ ತಂಡ ದಾಳಿ ಮಾಡಿದ್ದು, ಈ ವೇಳೆ ಲಕ್ಷ ಮೌಲ್ಯದ 14 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ಕೆಆರ್ಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.