ಬೆಂಗಳೂರು:– ಬೆಲೆ ದಿಢೀರ್ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರು ಆತಂಕಕ್ಕೊಳಗಾಗಿದ್ದಾರೆ. ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೇ ಕಂಗಾಲಾಗಿದ್ದಾರೆ. ಮಾವು ಬೆಳೆದವರ ಗೋಳು ಹೇಳ ತೀರದಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಕರ್ನಾಟಕದ ಮಾವು ಬೆಳಗಾರರ ನೆರವಿಗೆ ಮುಂದಾಗಿದ್ದು, 2.5 ಲಕ್ಷ ಟನ್ ಮಾವು ಖರೀದಿಗೆ ಒಪ್ಪಿಗೆ ಸೂಚಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಬೆಲೆಗಳಲ್ಲಿನ ವ್ಯತ್ಯಾಸದ ವೆಚ್ಚವನ್ನು ಭರಿಸುತ್ತವೆ ಮತ್ತು ಅದನ್ನು ರೈತರಿಗೆ ಪಾವತಿಸುತ್ತದೆ. ಒಟ್ಟು 2.5 ಲಕ್ಷ ಟನ್ ಮಾವು ಖರೀದಿಗೆ ಕೇಂದ್ರ ಒಪ್ಪಿಗೆ ಸೂಚಿಸಿದ್ದು, ಅಧಿಕೃತ ಆದೇಶ ಬಾಕಿ ಇದೆ. ಈ ಮಹತ್ವ ನಿರ್ಧಾರಕ್ಕೆ ಸಚಿವ ಚಲುವರಾಯ ಸ್ವಾಮಿ ಅವರು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ರಿಗೆ ಧನ್ಯವಾದ ತಿಳಿಸಿದ್ದಾರೆ
ಕರ್ನಾಟಕದಲ್ಲಿ ಉತ್ಪಾದನೆಯಾದ ಅಂದಾಜು 10 ಲಕ್ಷ ಮೆಟ್ರಿಕ್ ಟನ್ಗಳಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಗಳವರೆಗೆ ಪರಿಹಾರ ನೀಡುವ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ತೋತಾಪುರಿ ಮಾವಿನಹಣ್ಣಿಗೆ ರೈತರು ಸಾಮಾನ್ಯಕ್ಕಿಂತ ಕಡಿಮೆ ಬೆಲೆಯನ್ನು ಪಡೆಯುತ್ತಿರುವುದರಿಂದ, ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಮಾರುಕಟ್ಟೆ ದರಕ್ಕಿಂತ ಕಡಿಮೆಯಾದ ವ್ಯತ್ಯಾಸದ ವೆಚ್ಚವನ್ನು ಸಮಾನವಾಗಿ ಭರಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ.