ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್,ಕುಮಾರ್ ಅವರನ್ನು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 1.25 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎನ್ ಕುಮಾರ್ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ ಸೇರಿದಂತೆ ಹಲವು ಚಿತ್ರಗಳನ್ನು ಎಂ ಎನ್ ಕುಮಾರ್ ನಿರ್ಮಿಸಿದ್ದರು. ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ. ಈ ಹಿಂದೆ ಕುಮಾರ್ ಅವರು ಕಿಚ್ಚ ಸುದೀಪ್ ಮೇಲೆ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.