Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿಸಿ, ಸಿಇಒ ಗಳ ಜೊತೆ ಸಭೆ: ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಕ್ರಮ ಗ್ಯಾರಂಟಿ – ಸಿಎಂ ಸಿದ್ದರಾಮಯ್ಯ

    By Author AINMay 30, 2025
    Share
    Facebook Twitter LinkedIn Pinterest Email
    Demo

    ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

    ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!

    *ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ.

    *ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

    *10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯ

    *ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಎಚ್ಚರಿಸಿದರು.

    *ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    *ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ.

    *ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

    *ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ.

    *ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

    *ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

    *ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Corona: ಸದ್ದಿಲ್ಲದೇ ಹೆಚ್ಚಾಗ್ತಿದೆ ಕೋವಿಡ್ ಕೇಸ್: ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ!

    May 31, 2025

    ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ: ಕ್ರಿಮಿನಲ್ ಕೇಸು ಹಾಕಿ: ಸಿಎಂ ತಾಕೀತು

    May 31, 2025

    CSR ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ: ಡಿಸಿಎಂ ತೀವ್ರ ಅಸಮಾಧಾನ

    May 31, 2025

    ದೇಶದಲ್ಲಿ ಕೊರೋನಾ ವೈರಸ್ ಹರಡುವಿಕೆ ಹೆಚ್ಚಳ: 2 ಸಾವಿರ ದಾಟಿದ ಪಾಸಿಟಿವ್ ಪ್ರಕರಣಗಳು

    May 31, 2025

    ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ಧಾಳಿ

    May 31, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯಾದ್ಯಂತ ಲೋಕಾ ರೇಡ್

    May 31, 2025

    ರಸ್ತೆ ಅಪಘಾತ: KSRTC ಬಸ್‌ಗೆ ಕಾರು ಡಿಕ್ಕಿ ಹೊಡೆದು ಓರ್ವ ಸಾವು!

    May 31, 2025

    ಬೆಂಗಳೂರಿಗೆ ಕೋವಿಡ್ ಆತಂಕ: 150ರ ಗಡಿ ದಾಟಿದ ಆಕ್ಟೀವ್ ಕೇಸ್!

    May 31, 2025

    ಪುಡಿರೌಡಿಗಳನ್ನು ಬಿಟ್ಟು ಶಾಲೆಯಲ್ಲಿ ‘ಕೈ’ ಮುಖಂಡನ ದಾಂಧಲೆ ಆರೋಪ!

    May 31, 2025

    ವೇಗವಾಗಿ ಬರೋ ಕಾರುಗಳೇ ಇವರ ಟಾರ್ಗೆಟ್: ಬೆಂಗಳೂರು ಚೆನ್ನೈ ಎಕ್ಸ್ ಪ್ರೆಸ್ ಹೈ ವೇನಲ್ಲಿ ಡೆಡ್ಲಿ ದರೋಡೆ ಗ್ಯಾಂಗ್..?

    May 31, 2025

    ಧಾರಕಾರ ಮಳೆ: ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

    May 31, 2025

    ಥಿಯೇಟರ್‌ಗಳಿಗೆ ಬೆಂಕಿ ಹಚ್ಚಬೇಕಾಗುತ್ತದೆ ಹುಷಾರ್: ನಾರಾಯಣಗೌಡ ಎಚ್ಚರಿಕೆ!

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.