ಬೆಂಗಳೂರು:- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಈ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಈ ಎಲ್ಲಾ ಸಮಸ್ಯೆಗಳಿಗೆ ಕರಿಬೇವು ವರದಾನವಂತೆ: ಆದ್ರೆ ತಿನ್ನೋದು ಮಾತ್ರ ಹೀಗಿರಲಿ!
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ನಡೆದು 11 ಮಂದಿ RCB ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಭೇಟಿ ಕುತೂಹಲ ಕೆರಳಿಸಿದೆ.
ನಾಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ ನಿಶ್ಚಯವಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ, ನಾಳೆ ಬೆಳಗ್ಗೆ ನಡೆಯುವ ಮದುವೆ ಮುಹೂರ್ತದಲ್ಲಿ ಭಾಗಿಯಾಗಲಿದ್ದಾರೆ.
ಭಾನುವಾರ ಮಧ್ಯಾಹ್ನದವರೆಗೂ ಬೆಂಗಳೂರಿನಲ್ಲೇ ಬೀಡು ಬಿಡಲಿರುವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರನ್ನು ಕರೆದು ಮಾತುಕತೆ ನಡೆಸಲಿದ್ದಾರೆ.