Close Menu
Ain Live News
    Facebook X (Twitter) Instagram YouTube
    Monday, May 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್: 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

    By Author AINMay 9, 2025
    Share
    Facebook Twitter LinkedIn Pinterest Email
    Demo

    ಮಂಡ್ಯ :- ಹಲವು ದಶಕಗಳ ಹಿಂದೆ ಕೆಮ್ಮಣ್ಣು ನಾಲೆಯ ನೀರನ್ನು ಪಟ್ಟಣ ಹಾಗೂ ಹಳ್ಳಿಗಳಿಂದ ಬರುತ್ತಿದ್ದ ಜನತೆ ಕುಡಿಯುವ ನೀರನ್ನಾಗಿ ಬಳಸುತ್ತಿದ್ದರು. ಆದರೆ, ಸರ್ಕಾರದ ಅನುದಾನದ ಕೊರತೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಕೆಮ್ಮಣ್ಣು ನಾಲೆಯೂ ಸೂಕ್ತ ನಿರ್ವಹಣೆ ಇಲ್ಲದೇ ಪಟ್ಟಣದ ದೊಡ್ಡ ಚರಂಡಿಯಾಗಿದ್ದು, ಜನತೆ ಮೂಗುಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

    ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನಾಲಾ ಅಭಿವೃದ್ಧಿ ಬಗ್ಗೆ ಜನಪ್ರತಿನಿಧಿಗಳ ಬಳಿ ನೂರಾರು ಬಾರಿ ಮನವಿ, ಪ್ರತಿಭಟನೆ ಮತ್ತು ಆಗ್ರಹ ನಡೆಸಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ವಿಧಾನಸಭಾ ಚುನಾವಣೆಗೂ ಮುನ್ನ ಕೆಮ್ಮಣ್ಣು ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಸಕ ಕೆ.ಎಂ.ಉದಯ್ ಕೊಟ್ಟ ಮಾತನ್ನು ಈಡೇರಿಸುವ ಮೂಲಕ ರೈತರ ಬೆನ್ನೆಲುಬಾಗಿ ನಿಂತಿದ್ದು, ಅಂದಾಜು 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣು ನಾಲೆಯ ಆಧುನೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿದರು.ಮದ್ದೂರು ಪಟ್ಟಣದ ಕೆಮ್ಮಣ್ಣು ನಾಲೆಯ ವೃತ್ತದ ಬಳಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    ನಾನು ಶಾಸಕನಾದ ಸಂದರ್ಭದಲ್ಲಿ ಉದಯ್ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡೋದಿಲ್ಲ, ಜನರ ಕೈಗೆ ಮೊದಲೇ ಸಿಗೋದಿಲ್ಲ ಎಂದು ನನ್ನ ಬಗ್ಗೆ ಟೀ ಅಂಗಡಿ, ಬಾರ್ ಗಳಲ್ಲಿ ಕುಹಕದ ಮಾತುಗಳನ್ನು ಆಡುತ್ತಿದ್ದರು. ಆದರೆ, ಕೇವಲ 2 ವರ್ಷಗಳಲ್ಲೇ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಾ ಕ್ಷೇತ್ರದ ಅಭಿವೃದ್ಧಿಗೆ 1ಸಾವಿರ ಕೋಟಿಗೂ ಅಧಿಕ ವಿಶೇಷ ಅನುದಾನವನ್ನು ತಂದು ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ತಕ್ಕ ಉತ್ತರ ನೀಡಿದ್ದೇನೆ ಎಂದು ತಿರುಗೇಟು ನೀಡಿದರು.

    ನಾನು ಸಹ ಒಂದು ಸಣ್ಣ ಹಳ್ಳಿಯ ರೈತನ ಮಗನಾಗಿ ಹಟ್ಟಿದ್ದೇನೆ. ರೈತರ ಕಷ್ಟಗಳನ್ನು ತುಂಬಾ ನೋಡಿದ್ದೇನೆ ಮತ್ತು ಗಮನಿಸಿದ್ದೇನೆ. ಆದ್ದರಿಂದ ರೈತರಿಗೆ ಶಾಶ್ವತವಾಗಿ ಅನುಕೂಲವಾಗುವಂತ ನೀರಾವರಿ ಯೋಜನೆಗಳನ್ನು ಜಾರಿಗೆ ತಂದು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಕೆಮ್ಮಣ್ಣು ನಾಲೆ ಮೂಲಕ ದೇಶಹಳ್ಳಿ, ಚಾಮನಹಳ್ಳಿ, ಶಿವಪುರ, ಮದ್ದೂರು, ಚನ್ನಸಂದ್ರ, ನಗರಕೆರೆ ಸೇರಿದಂತೆ ಸುಮಾರು 13 ಗ್ರಾಮಗಳ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ತ ನಿರ್ವಹಣೆ ಕೊರತೆಯಿಂದ ಸರಾಗವಾಗಿ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ 21.75 ಕಿ.ಮೀ ಉದ್ದಕ್ಕೂ ಬಾಕ್ಸ್ ಡ್ರೈನ್ ನಿರ್ಮಾಣ, 18 ಅಡ್ಡ ಮೋರಿಗಳ ನಿರ್ಮಾಣ ಹಾಗೂ ಪಟ್ಟಣದ ನಂಜಪ್ಪ ಕಲ್ಯಾಣ ಮಂಟಪದಿಂದ ಗೊರವನಹಳ್ಳಿ ರಸ್ತೆಯ ಕೆಇಬಿ ಸಬ್ ಸ್ಟೇಷನ್ ವರೆಗೆ ಅಡ್ಡ ಮೋರಿಗಳ ನಿರ್ಮಾಣ ಹಾಗೂ ನಾಲೆಯ ಎರಡು ಕಡೆ ರಸ್ತೆ ಅಭಿವೃದ್ಧಿ ಮತ್ತು ಪಟ್ಟಣದ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಇದರ ಜೊತೆಗೆ ಚಾಮನಹಳ್ಳಿ ಬೈರನ್ ನಾಲೆ ಮತ್ತು ವೈದ್ಯನಾಥಪುರ ನಾಲಾ ಅಭಿವೃದ್ಧಿ ಕಾಮಗಾರಿಗೆ 49.50 ಕೋಟಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಗೂ ಸೂಳೆಕೆರೆ ಅಚ್ಚುಕಟ್ಟು ಪ್ರದೇಶದ ನಾಲೆಗಳ ಅಭಿವೃದ್ಧಿಗೆ‌ 80 ಕೋಟಿ ಗೂ ಹೆಚ್ಚಿನ ಅನುದಾನದಲ್ಲಿ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

    ಕೆಮ್ಮಣ್ಣು ನಾಲೆಗೆ ಸಾರ್ವಜನಿಕರು ಕಲುಷಿತ ವಸ್ತುಗಳನ್ನ ಹಾಕುವುದನ್ನು ನಿಲ್ಲಿಸಬೇಕು ನಾಲೆಯ ಅಭಿವೃದ್ಧಿ ಜೊತೆಗೆ ನೀರು ಕೂಡ ಸ್ವಚ್ಚವಾಗಿರಬೇಕು ಆದ್ದರಿಂದ ಸರ್ಕಾರದಿಂದ 19 ಕೋಟಿ ರೂ. ವಿಶೇಷ ಅನುದಾನ ತಂದು ಒಳಚರಂಡಿ ನೀರು ಕೆಮ್ಮಣ್ಣು ನಾಲೆಗೆ ಸೇರದಂತೆ ಆ ಕಾಮಗಾರಿಯನ್ನು ಸಹ ನಾಲೆಯ ಅಭಿವೃದ್ಧಿ ಜೊತೆಗೆ ಮಾಡಲಾಗುವುದು ಎಂದು ಹೇಳಿದರು.

    ಈಗಾಗಲೇ ಮದ್ದೂರು ಪಟ್ಟಣದ ರಸ್ತೆ ಅಗಲೀಕರಣಕ್ಕೆ ಬಜೆಟ್ ನಲ್ಲಿ ಅನುಮೋದನೆ ನೀಡಲಾಗಿದ್ದು, ಇನ್ನು ಕೆಲ ದಿನಗಳಲ್ಲೇ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡುತ್ತ ಹಂತ ಹಂತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.

    ಇದೇ‌ ವೇಳೆ ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತೈಲೂರು ಚೆಲುವರಾಜು, ಅಣ್ಣೂರು ರಾಜೀವ್, ಜಿ.ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಪುರಸಭಾ ಸದಸ್ಯರಾದ ಸಿದ್ದರಾಜು, ಕಮಲ್ ನಾಥ್, ಪ್ರಮೀಳಾ, ರತ್ನಮ್ಮ, ಸರ್ವಮಂಗಳ, ಕಾವೇರಿ ನೀರಾವರಿ ನಿಗಮದ ಇಇ ನಂಜುಂಡೇಗೌಡ, ಎಇಇ ನಾಗರಾಜ್, ಎಇ ದೀಪಕ್, ಪ್ರವೀಣ್ ಮತ್ತಿತ್ತರರು.

    ವರದಿ : ಗಿರೀಶ್ ರಾಜ್ ಮಂಡ್ಯ

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ ನಗರ ಪೊಲೀಸರಿಂದ ರೌಡಿ ಪೆರೇಡ್: ಗಡಿಪಾರು ಮಾಡುವುದಾಗಿ ಎಚ್ಚರಿಕೆ

    May 11, 2025

    ಪಾಕಿಸ್ತಾನದವರು ಸಾಯುವವರೆಗೂ ನಮಗೆ ವೈರಿಗಳೇ: ಬಸವರಾಜ್ ಹೊರಟ್ಟಿ ಅಸಮಾಧಾನ

    May 11, 2025

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.