ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಬೆಂಗಳೂರು ನಗರದ ಹಲವೆಡೆ ನೀರು ನಿಂತು ಭಾರಿ ಹಾನಿ ಉಂಟಾಗಿತ್ತು. ಅದರಂತೆ ಮಹದೇವಪುರ ಕ್ಷೇತ್ರದ ಹಲವೆಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹದೇವಪುರ ಕ್ಷೇತ್ರದ ಕಣ್ಣೂರು, ಬೈರತಿ, ಬಿಳೆಶೀವಾಲೆ, ರಾಂಪುರ, ಕಿತ್ತಗನೂರು, ಚಿನ್ನಪ್ಪನಹಳ್ಳಿ, ಪಣತ್ತೂರು, ಬಳಗೇರೆ, ಗುಂಜೂರು, ಕೈಕೊಂಡ್ರಹಳ್ಳಿ, ಬೆಳ್ಳಂದೂರು ಸೇರಿದಂತೆ ಹಲವೆಡೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಗಾಲ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ತಾಕೀತು ಮಾಡಿದರು.