Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಲ್ಲಿ ಮತದಾರರ ಪಟ್ಟಿಯಲ್ಲಿ ಮಹಿಳೆಯರು ಹೆಚ್ಚು ಸೇರ್ಪಡೆಯಾಗಲಿ: ಉಮಾ ಮಹದೇವನ್

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ ಲಿಂಗ ಪ್ರಮಾಣ, ಚುನಾವಣಾ ಜನಸಂಖ್ಯೆ(EP) ಪ್ರಮಾಣ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಿಯಾಯೋಜನೆ ರೂಪಿಸಿಕೊಳ್ಳಲು ಬೆಂಗಳೂರು ಕೇಂದ್ರದ ಮತದಾರರ ಪಟ್ಟಿ ವೀಕ್ಷಕರು(Roll Observer) ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್, ಭಾ.ಆ.ಸೇ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು‌.

    ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ಇಂದು ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ 7 ವಿಧಾನ ಸಭಾ ಕ್ಷೇತ್ರ(ಆರ್‌ಆರ್ ನಗರ, ಶಿವಾಜಿನಗರ, ಶಾಂತಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ರಾಜಾಜಿನಗರ)ಗಳಲ್ಲಿ ಮತದಾರರ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.

    ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮಾಡಿ:

    ಬೆಂಗಳೂರು ಕೆಂದ್ರ ವ್ಯಾಪ್ತಿಯಲ್ಲಿ IEC ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಶಾಲಾ-ಕಾಲೇಜು, ಕಛೇರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜೊತೆಗೆ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಡಬೇಕೆಂದು ತಿಳಿಸಿದರು.

    ಮಹಿಳೆಯರು ಸೇರ್ಪಡೆಗೆ ಆದ್ಯತೆ ಕೊಡಿ:

    ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಮಹಿಳೆಯರು ಹೆಚ್ಚು ಸೇರ್ಪಡೆಯಾಗಬೇಕು. ಈ ಸಂಬಂಧ ಇದಕ್ಕೆ ಬೇಕಾದ ಅಗತ್ಯತೆಗಳನ್ನು ಮಾಡಿಕೊಂಡು ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳವಾಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಬೆಯಲ್ಲಿ ಬೆಂಗಳೂರು – ಕೇಂದ್ರ ಚುನಾವಣಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ಹರೀಶ್ ಕುಮಾರ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಚುನಾವಣಾ ವಿಭಾಗದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    Video: ಮಿತಿಮೀರಿದ ಹಿಂದಿವಾಲಗಳ ಕುಚೇಷ್ಟೆ: ಆರ್ಥಿಕತೆ ನಡೆಯುವುದೇ ನಮ್ಮಿಂದ – ಆಟೋ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ

    June 9, 2025

    ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ: ಸಚಿವ ಪರಮೇಶ್ವರ್

    June 9, 2025

    Bengaluru Stampede: ಹೆಡ್ ಕಾನ್ಸ್ಟೇಬಲ್ ಏಕಾಂಗಿ ಪ್ರತಿಭಟನೆ: ಬೆಂಬಲಕ್ಕೆ ಧಾವಿಸಿದ ಸುರೇಶ್ ಕುಮಾರ್!

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್!

    June 9, 2025

    ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ವಾಹನಕಳ್ಳತನ: ಇಬ್ಬರು ಅರೆಸ್ಟ್!

    June 9, 2025

    ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

    June 9, 2025

    Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು!

    June 9, 2025

    ಏರ್ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಯುಕನನ ಶವ ಪತ್ತೆ!

    June 9, 2025

    ಹುಬ್ಬಳ್ಳಿ:-ಖಾಸಗೀಕರಣದಿಂದ ರೈಲ್ವೆ ವಿಭಾಗದಲ್ಲಿ ಅಸುರಕ್ಷತೆ

    June 9, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.