ಬೆಂಗಳೂರು/ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿರಿಪೋರ್ಟ್ಗೆ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಇಡಿ ಟೆನ್ಷನ್ ಶುರುವಾಗಿದೆ.
ವಕ್ಫ್ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್ಡಿ ದೇವೇಗೌಡ!
ಲೋಕಾಯುಕ್ತ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿಂದು ನಡೆಯಿತು.
ಇಡಿ ಪರ ಹಿರಿಯ ವಕೀಲ ಮಧುಕರ್ ದೇಶಪಾಂಡೆ ವಾದ ಮಂಡನೆ ಮಾಡಿದರು. ಲೋಕಾಯುಕ್ತ ತನಿಖೆಯ ಬಗ್ಗೆ ಆಕ್ಷೇಪ ಎತ್ತಿ ವಾದ ಮಂಡಿಸಿದರು. ʻಬಿ ರಿಪೋರ್ಟ್ʼ ಚಾಲೆಂಜ್ ಮಾಡಲು ಇಡಿಗೆ ಅಧಿಕಾರ ಇದೆ ಎಂದು ಹೇಳಿದರು.
ಈ ವೇಳೆ ಜಡ್ಜ್ ಸಂತೋಷ್ ಗಜಾನನ ಭಟ್, ಕೋರ್ಟ್ ʻಬಿ ರಿಪೋರ್ಟ್ʼ ಒಪ್ಪಿಕೊಂಡರೆ ನಿಮ್ಮ ನಿಲುವೇನು? ಅಂತ ಪ್ರಶ್ನೆ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಇಡಿ ತನಿಖೆಯಲ್ಲಿ ಪತ್ತೆಯಾದ ಅಂಶಗಳನ್ನು ಹಂಚಿಕೊಂಡಿದೆ. ಲೋಕಾಯುಕ್ತ ಪೊಲೀಸರಿಗೆ ವಿವರ ಹಂಚಿಕೊಂಡರೂ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಹೀಗಾಗಿ ಇಡಿ ಬಿ ರಿಪೋರ್ಟ್ ಪ್ರಶ್ನಿಸಿದೆ. ಒಂದು ವೇಳೆ ಕೋರ್ಟ್ ಬಿ ರಿಪೋರ್ಟ್ ಒಪ್ಪಿಕೊಂಡರೆ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ. ಬಿ ರಿಪೋರ್ಟ್ ಪ್ರಶ್ನಿಸಲು ಇಡಿಗೆ ಅಧಿಕಾರವಿದೆ ಎಂದು ವಾದಿಸಿದರು.
ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ಏಪ್ರಿಲ್ 8ಕ್ಕೆ ಕಾಯ್ದಿರಿಸಿತು. ಅಲ್ಲದೇ ಏಪ್ರಿಲ್ 8ಕ್ಕೆ ಲೋಕಾಯುಕ್ತ ಎಸ್ಪಿಪಿಗೂ ವಾದ ಮಂಡನೆ ಅವಕಾಶ ಕಲ್ಪಿಸಲು ಕೋರ್ಟ್ ನಿರ್ಧರಿಸಿತು.