ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬಿಡದಿ ಪೊಲೀಸರು ರಿಕ್ಕಿ ರೈ ಹೇಳಿಕೆಯನ್ನು ದಾಖಲಿಸಿದ್ದಾರೆ. ಶನಿವಾರ ಮಧ್ಯಾಹ್ನವೇ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ರಿಕ್ಕಿ ರೈ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಪೊಲೀಸರ ಎದುರು ಎಫ್ ಐಆರ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳಾದ ರಾಕೇಶ್ ಮಲ್ಲಿ, ಅನುರಾಧ ರೈ, ನಿತೀಶ್ ಶೆಟ್ಟಿ, ವೈದ್ಯನಾಥನ್ ಆರೋಪಿಗಳೇ ನನ್ನ ಮೇಲೆ ಅಟ್ಯಾಕ್ ಮಾಡಿಸಿದ್ದಾರೆ ಅಂತಾ ಹೇಳಿಕೆ ನೀಡಿದ್ದಾರೆ.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ ; ನಾಲ್ವರ ವಿರುದ್ಧ ಎಫ್ಐಆರ್
ಆಸ್ತಿ ವಿಚಾರವೇ ಗುಂಡಿನ ದಾಳಿಗೆ ಕಾರಣವಾಗಿದ್ದು, ನಾನು ರಷ್ಯಾದಲ್ಲಿದ್ದೆ , ಜಮೀನು ವಿವಾದ ಸಂಬಂಧ ಕೋರ್ಟ್ ನಲ್ಲಿ ಕೇಸ್ ಇತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿಗೆ ಬಂದಾಗ ಸದಾಶಿವನಗರ, ಬಿಡದಿ ವಾಸವಿರುತ್ತಿದ್ದೆ. ಹನ್ನೆರಡು ಗಂಟೆ ಗೆ ಎರಡು ಕಾಲ್ ಬಂದಿದ್ದು ಹಾಗಾಗಿ ಹೊರಟಿದ್ದೆ. ಸದಾಶಿವನಗರ ಮನೆಗೆ ಹೋಗುವಾಗ ಮನೆಯಿಂದ ಹೊರಗಿನ ರಸ್ತೆಗೆ ಬಂದಾಗ ಅಟ್ಯಾಕ್ ಮಾಡಲಾಗಿದೆ. ನನ್ನ ಕೈ ಹಾಗೂ ಮೂಗಿಗೆ ಗುಂಡು ತಗುಲಿದೆ. ನನ್ನ ಸ್ನೇಹಿತರು ಹಾಗೂ ಡ್ರೈವರ್ ಆಸ್ಪತ್ರೆಗೆ ಸೇರಿಸಿದರು. ರಾಕೇಶ್ ಮಲ್ಲಿ ಹಾಗೂ ನನ್ನ ಚಿಕ್ಕಮ್ಮ ಅನುರಾಧರೇ ಅಟ್ಯಾಕ್ ಮಾಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಮಧ್ಯರಾತ್ರಿ ಬಿಡದಿಯ ರಿಕ್ಕಿ ರೈ ಮೇಲೆ ಫೈರಿಂಗ್ ನಡೆದಿತ್ತು.