ಬೆಂಗಳೂರು:- ನೇಪಾಳಿ ದಂಪತಿಯಿಂದ ಮನೆಗಳ್ಳತನವೊಂದು ನಡೆದಿರುವ ಘಟನೆ ಹೆಚ್ಎಎಲ್ನ ಶಾಸ್ತ್ರಿನಗರದಲ್ಲಿ ಜರುಗಿದೆ. ಉದ್ಯಮಿ ಮನೆಯಲ್ಲಿದ್ದ ನಗದು, ಚಿನ್ನಾಭರಣ, ಲೈಸೆನ್ಸ್ ಪಿಸ್ತೂಲ್, 2 ಕೆಜಿ ಚಿನ್ನ ಮತ್ತು 10 ಲಕ್ಷ ರೂ ನಗದು ಕಳ್ಳತನ ದೋಚಿ ಪರಾರಿ ಆಗಿದ್ದಾರೆ.
3 ತಿಂಗಳ ಹಿಂದೆ ನೇಪಾಳಿ ಮೂಲದ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ನಂಬಿಕೆ ಗಳಿಸಿದ್ದ ನೇಪಾಳಿ ದಂಪತಿ ಬಿಟ್ಟು ತಿರುಪತಿಗೆ ತೆರಳಿದ್ದರು. ಇದೇ ಒಳ್ಳೆಯ ಅವಕಾಶವೆಂದು ನೇಪಾಳಿ ದಂಪತಿ ಸೇರಿ ಐದು ಜನರಿಂದ ಮನೆಯ ಪ್ರಮುಖ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿದ ಲಕ್ಷಾಂತರ ರೂ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಮಾಮೂಲಿಯಂತೆ ಕಾರ್ ಬುಕ್ ಮಾಡಿದ್ದ ಕಳ್ಳರು ನಾಲ್ಕು ಜನ ಮನೆ ಬಳಿ ಬಂದ ಕಾರಿನಲ್ಲಿ ಚಿನ್ನಭರಣ, ಹಣದ ಬ್ಯಾಗ್ಗಳನ್ನು ತುಂಬಿಕೊಂಡು ಹೋಗಿದ್ದಾರೆ. ಕಾರಿನ ಚಾಲಕನಿಗೂ ಕಳ್ಳತನಕ್ಕೂ ಯಾವುದೇ ಸಂಬಂಧವಿಲ್ಲ.
ಇತ್ತ ಮೇ 28ರ ಬೆಳಗಿನ ಜಾವ ರಮೇಶ್, ಮೊಬೈಲ್ನಲ್ಲಿ ಮನೆಯ ಸಿಸಿಟಿವಿ ಪರಿಶೀಲಿಸಿದ್ದು, ಆಫ್ ಆಗಿತ್ತು. ಕರೆಂಟ್ ಹೋಗಿ ಸಿಸಿಟಿವಿ ಆಫ್ ಆಗಿರಬಹುದು ಅಂದುಕೊಂಡಿದ್ದಾರೆ. ಬಳಿಕ ಪಕ್ಕದ ಮನೆಯವರು ಕರೆ ಮಾಡಿ ಮನೆಯಲ್ಲಿ ಯಾರೂ ಇಲ್ಲ ಎಂದಿದ್ದಾರೆ. ನಂತರ ತಮ್ಮ ಸ್ನೇಹಿತರಿಗೆ ಮನೆ ಬಳಿ ಹೋಗಲು ತಿಳಿಸಿದ್ದ ರಮೇಶ್, ಈ ವೇಳೆ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಸದ್ಯ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.