ಹುಬ್ಬಳ್ಳಿ; ಸುಸಂಸ್ಕೃತ ಸುಭದ್ರ, ರಾಷ್ಟ್ರ ಹಾಗೂ ಜಾತ್ಯಾತೀತ ಸಮಾಜ ಕಟ್ಟುವ ಜವಾಬ್ದಾರಿ ಯುವ ಶಕ್ತಿ ಮೇಲಿದ್ದು ಎಂದಿಗಿಂತಲೂ ಇಂದು ಯುವ ಶಕ್ತಿ ಮೇಲೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅಭಿಪ್ರಾಯಪಟ್ಟರು.
ನಗರದ ಕಾರವಾರ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಿಗೆ ಪಕ್ಷದ ಸಂಘಟನೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ
ಭಾಗವಹಿಸಿ ಅವರು ಮಾತನಾಡಿದರು,
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಯುವ ಕಾಂಗ್ರೆಸ್ ಗೆ 65 ವರ್ಷಗಳ ಇತಿಹಾಸವಿದ್ದು ಮುಖ್ಯಮಂತ್ರಿ ಸೇರಿದಂತೆ ಅನೇಕ ದೊಡ್ಡ ನಾಯಕರನ್ನ ಕೊಟ್ಟಿದ್ದು ಯುವ ಕಾಂಗ್ರೆಸ್ ಸಮಿತಿ ಆದ್ದರಿಂದ ಮುಂದಿನ 2029 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅತ್ಯಂತ ದೊಡ್ಡ ಬಹುಮತ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ ಪಕ್ಷದ ತತ್ವ ಸಿದ್ದಾಂತ, ಸರಕಾರದ ಅಭಿವೃದ್ಧಿ ಕಾಮಗಾರಿಗಳು ಇದರ ಐದು ಗ್ಯಾರಂಟಿಗಳ ಕುರಿತು ಜನರಿಗೆ ತಿಳಿಹೇಳುವ ಕಾರ್ಯ ನಡೆಯಬೇಕು ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಯಾವುದೇ ಭರವಸೆ ಈಡೇರಿಸಿಲ್ಲ ದಿನ ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ತಾಂಡವಾಡುತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಯಾವುದೇ ಭರವಸೆ ಈಡೇರಿಸುವ ವಿಫಲವಾಗಿದ್ದಾರೆ. ರಾಜ್ಯದಲ್ಲಿ ಐವರು ಕೇಂದ್ರ ಮಂತ್ರಿಗಳು ಇದ್ದರು ಯಾವುದೇ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಮಹದಾಯಿ ಸೇರಿದಂತೆ ಅನೇಕ ಯೋಜನೆಗಳು ಜಾರಿ ಮಾಡಲು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಇಚ್ಛಾಶಕ್ತಿ ಇಲ್ಲ ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರು, ರಾಷ್ಟ್ರೀಯ ರಾಜ್ಯ ಪ್ರಭಾರಿ, ಭಾರತೀಯ ಯುವ ಕಾಂಗ್ರೆಸ್ ನಿಗಮ್ ಭಂಡಾರಿ, ಹುಬ್ಬಳ್ಳಿ ಧಾರವಾಡ ಮಹಾನಗರ ಸಮಿತಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅರ್ಜುನ ಪಾಟೀಲ್, ಗದಗ ಜಿಲ್ಲಾ ಅಧ್ಯಕ್ಷ ಕೃಷ್ಣ ಪಾಟೀಲ್ಮಂಜುನಾಥ್ ಎಚ್.ಎಸ್., ರಾಜ್ಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಹುಲ್ ಜಾರಕಿಹೊಳಿ, ಕೃಷ್ಣಗೌಡ ಪಾಟೀಲ್, ಅನಿಲ್ ಕುಮಾರ್ ಪಾಟೀಲ್, ಡಿಸಿಸಿ ಅಧ್ಯಕ್ಷರು, ಧಾರವಾಡ ಗ್ರಾಮೀಣಶೀತಲ ಮಠಪತಿ ಮುಂತಾದವರು ಇದ್ದರು.