ಬೆಂಗಳೂರು:- ದೇಶದ ಪ್ರಧಾನಿ ಆಗಿದ್ದ ದೇವೇಗೌಡರು ಈಶ್ವರನ ಪುತ್ರ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಜೂನ್ 16 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತವಾಗಿ ಪ್ರವಾಸ ಆರಂಭ ಮಾಡುತ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ʼಜನರೊಂದಿಗೆ ಜನತಾದಳʼ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಇಂದಿನಿಂದ ಅಧಿಕೃತವಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಆರಂಭ ಮಾಡಿದ್ದೇವೆ. ರಾಜ್ಯ ಪ್ರವಾಸದ ವೇಳೆ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ. ಪಕ್ಷಕ್ಕಾಗಿ ದುಡಿಯುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು. ಕನಿಷ್ಠ ಐವತ್ತು ಲಕ್ಷ ಜನ ಸದಸ್ಯರಾಗಬೇಕು ಎಂಬ ಗುರಿ ಇಟ್ಟುಕೊಂಡು ಹೋಗೋಣ. ಮತ್ತೆ ಈ ಪಕ್ಷವನ್ನು ಪಕ್ಷವನ್ನು ತಳ ಮಟ್ಟದಿಂದ ಪುಟಿದೇಳುವಂತೆ ಮಾಡಬೇಕು ಎಂಬ ನಿಟ್ಟಿನಲ್ಲಿ ಆ.16ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ. ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.
ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದರು. ದೇವೇಗೌಡರನ್ನು ಈಶ್ವರನ ಪುತ್ರ ಎಂದೇ ಹೇಳಬಹುದು. ರಾಜ್ಯದ ಬಗ್ಗೆ ಅವರಿಗೆ ಇದ್ದ ಬದ್ದತೆ ನೋಡಿದರೆ ಹಲವು ಜನರಿಗೆ ಮಾರ್ಗದರ್ಶನ ಆಗುವಂತದ್ದು ಎಂದರು. ನನ್ನ ಒಳಗೆ ಆತಂಕವಿದೆ, ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೈತ ವರ್ಗಕ್ಕೆ ಕುಮಾರಣ್ಣ ಕೊಟ್ಟ ಕೊಡುಗೆ ಹೇಳಲು ಆಗದು. 25 ಸಾವಿರ ಕೋಟಿ ಯೋಜನೆಯನ್ನು ರೈತಾಪಿ ವರ್ಗಕ್ಕೆ ನೀಡಿದ್ದಾರೆ. ಪಂಚರತ್ನ ಯೋಜನೆ ಕನಸು ನನಸು ಆಗಬೇಕು. ಈ ಭ್ರಷ್ಟ ಸರಕಾರ ಸರಕಾರ ರಾಜ್ಯದಿಂದ ತೊಲಗಬೇಕು ಎಂದು ವಿರುದ್ಧ ಕಿಡಿಕಾರಿದರು.