ವಿಜಯಪುರ: ಈರುಳ್ಳಿ ದರ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಾಲ್ಗೆ ಕೇವಲ 200 ರೂಪಾಯಿಗೆ ಹರಾಜಾಗುತ್ತಿದೆ. ಕಡಿಮೆ ದರಕ್ಕೆ ಹರಾಜಾದ ಕಾರಣ ಈರುಳ್ಳಿ ಬೆಳೆಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ರಾಷ್ಟ್ರೀಯ ಹೆದ್ದಾರಿ ಮೇಲೆ ಈರುಳ್ಳಿ ಸುರಿದು ಬಿದ್ದು ಮಲ್ಲಿಕಾರ್ಜುನ ಬೋಲಗೊಂಡ ಎಂಬ ರೈತ ಹೊರಳಾಡಿದ್ದಾರೆ. ಇದೇ ಈರುಳ್ಳಿ ಬಾಗಲಕೋಟೆಯಲ್ಲಿ ಕ್ವಿಂಟಾಲ್ಗೆ 1000 ರೂಪಾಯಿಗೆ ಮಾರಾಟವಾಗಿತ್ತು.
ಡಿಎಪಿ ರಸಗೊಬ್ಬರ 1200 ರೂ., ಯೂರಿಯಾ 300 ರೂ. ಇದೆ. ನಾವು ಕಷ್ಟಪಟ್ಟು ಬೆಳೆದ ಈರುಳ್ಳಿಗೆ ಕೇವಲ 200 ರೂ. ಯಾಕೆಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕುರಿತು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.