ನವದೆಹಲಿ: ನಮ್ಮ ಹೋರಾಟ ಭಯೋತ್ಪಾದಕರೊಂದಿಗೆ ಹೊರತು ಪಾಕಿಸ್ತಾನ ಸೇನೆಯೊಂದಿಗೆ ಅಲ್ಲ ಎಂದು ವಾಯು ಕಾರ್ಯಾಚರಣೆಗಳ ಮಹಾ ನಿರ್ದೇಶಕ ಏರ್ ಮಾರ್ಷಲ್ ಎ.ಕೆ. ಭಾರ್ತಿ ಹೇಳಿದರು. ಭಾರತೀಯ ಸೇನೆಯ ಮೂರು ಪಡೆಯ ಅಂದರೆ, ವಾಯುಸೇನೆ, ನೌಕ ಪಡೆ ಹಾಗೂ ಭೂಸೇನೆ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು,
ನಮ್ಮ ಹೋರಾಟ ಭಯೋತ್ಪಾದಕರು ಮತ್ತು ಅವರ ಬೆಂಬಲಿತರೊಂದಿಗೆ ಮಾತ್ರವೇ ಹೊರತು ಪಾಕಿಸ್ತಾನ ಸೇನೆಯೊಂದಿಗೆ ಅಲ್ಲ” ಎಂದರು. ಆದರೆ, ಉಗ್ರ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ವೇಳೆ, ಪಾಕಿಸ್ತಾನ ಸೇನೆಯು ಮಧ್ಯಪ್ರವೇಶಿಸಿ ಭಯೋತ್ಪಾದಕರ ಪರವಾಗಿ ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಪರಿಣಾಮವಾಗಿ, “ನಾವು, ಆಪರೇಷನ್ ಸಿಂದೂರ ನಡೆಸಬೇಕಾಯಿತು ಎಂದು ಹೇಳಿದರು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಮುಂದುವರೆದು, ವೈರಿಗಳನ್ನು ಸೆದೆ ಬಡಿಯಲು ನಮ್ಮ ಎಲ್ಲಾ ಪಡೆಗಳು ಸಿದ್ದವಾಗಿದೆ ಎಂದ ಅವರು, ಪಾಕಿಸ್ತಾನದಿಂದ ಡ್ರೋನ್ ದಾಳಿಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದೇವೆ; ಹಾಗಾಗಿ, ‘ನಮ್ಮ ಎಲ್ಲಾ ಮಿಲಿಟರಿ ನೆಲೆಗಳು ಮತ್ತು ವ್ಯವಸ್ಥೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಲೇ ಇರುತ್ತವೆ’ ಎಂದರು.