Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ

    By Author AINJanuary 26, 2025
    Share
    Facebook Twitter LinkedIn Pinterest Email
    Demo

    ಕೊಪ್ಪಳ : ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ಶಿಳ್ಳಿಕ್ಯಾತರ ಅವರಿಗೆ ೨೦೨೫ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ತೊಗಲುಗೊಂಬೆಯಾಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡುತ್ತಾ ಇದನ್ನೇ ವೃತ್ತಿಯನ್ನಾಗಿಸಿಕೊಂಡು ಕಲೆಯಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. ಅಮೇರಿಕ, ಪ್ಯಾರಿಸ್, ಇಟಲಿ,ಇರಾನ್ ಮತ್ತು ಇರಾಕ್,ಸ್ವಿಟ್ಜರ್ಲೆಂಡ್, ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನು,ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ  ಪ್ರದರ್ಶನ ನೀಡಿ ಮೆಚ್ಚುಗೆ ಪಡೆದಿದ್ದಾರೆ.

     

    ತೊಗಲುಗೊಂಬೆಯಾಟ ಅಪ್ಪಟ ಗ್ರಾಮೀಣ ಕಲೆಯಾಗಿದ್ದು, ಆಧುನಿಕ ಸಿನಿಮಾ, ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆ ಹಲವು ಸವಾಲುಗಳನ್ನು ಎದುರಿಸಿ ಶಿಳ್ಳಿಕ್ಯಾತರ್ ಕುಟುಂಬವೂ ಇದನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ. ಭೀಮವ್ವ ಶಿಳ್ಳಿಕ್ಯಾತರ್ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಇಡೀ ಜಿಲ್ಲೆಯಲ್ಲಿ ಇದೊಂದೇ ಕುಟುಂಬ ನೂರಾರು ವರ್ಷಗಳಿಂದ ತೊಗಲುಗೊಂಬೆಯಾಟವನ್ನು ಪ್ರದರ್ಶಿಸುತ್ತಾ ಬಂದಿದೆ. ಇವರ ಮನೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಅಜ್ಜಿ ಭೀಮವ್ವ ಸಹ ಗೊಂಬೆಯಾಟ ಪ್ರದರ್ಶನಕ್ಕೆ ಜೀವನವನ್ನು ಮುಡಿಪಾಗಿಟ್ಟಿದ್ದಾರೆ.

    Padma Awards 2024: ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ 9 ಮಂದಿ! ಯಾರವರು? ಇಲ್ಲಿದೆ ಮಾಹಿತಿ!

    ಇವರು ಹೆಚ್ಚು ಪೌರಾಣಿಕ ಕಥೆ ಆಧಾರಿತ ರಾಮಾಯಣ, ಕುರುಕ್ಷೇತ್ರ, ವಿರಾಟ ಪರ್ವ, ಲವಕುಶ ಕಾಳಗ, ಕರ್ಣಪರ್ವ, ದ್ರೌಪದಿ ವಸ್ತ್ರಾಪಹರಣ, ಆದಿಪರ್ವ, ಸರ್ಪಪರ್ವ ಸೇರಿ ಮಹಾಭಾರತದ 18 ಪರ್ವಗಳನ್ನು ಪ್ರದರ್ಶಿಸುತ್ತಾರೆ. ತಮ್ಮ ಕುಟುಂಬದವರಿಗೆ ಇಂದಿಗೂ ಗೊಂಬೆಯಾಟ ತರಬೇತಿ ನೀಡುತ್ತಿದ್ದಾರೆ. ಇವರ ಸೇವೆ ಗುರುತಿಸಿ ಸಂಘ ಸಂಸ್ಥೆಗಳು ಅನೇಕ ಗೌರವ ಪ್ರಶಸ್ತಿ ನೀಡಿವೆ. ಭೀಮವ್ವನವರ ಮಗ ಕೇಶಪ್ಪ ಶಿಳ್ಳಿಕ್ಯಾತರ ಹಾಗೂ ಇವರ ಮಕ್ಕಳು ಸೇರಿ ಒಟ್ಟು 6 ಜನರು ಗೊಂಬೆಯಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

    ಇವರ ಸಾಧನೆಯನ್ನು ಕಂಡು ಸರ್ಕಾರವು ಅನೇಕ ಪ್ರಶಸ್ತಿ ನೀಡಿ ಗೌರವಿಸಿದೆ. 1993ರಲ್ಲಿ ತೆಹರಾನ್‌ನಲ್ಲಿ ಬೊಂಬೆ ಉತ್ಸವ ಪ್ರಶಸ್ತಿ, 63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪ್ರಾದೇಶಿಕ ರಂಗ ಕಲೆಗಳ ಅಧ್ಯಯನ ಪ್ರಶಸ್ತಿ, 2005-06 ನೇ ಸಾಲಿನಲ್ಲಿ ಜಾನಪದ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ,2010 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2014ರಲ್ಲಿ ರಾಜ್ಯೋತ್ಸವ ಪ್ರಶಸ್ತಿ,2020-21ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿ,2022ರಲ್ಲಿ ಹಿರಿಯ ನಾಗರೀಕ ಪ್ರಶಸ್ತಿ ಹೀಗೆ ಸರ್ಕಾರ ಸಂಘ ಸಂಸ್ಥೆಗಳಿಂದ ಅನೇಕ ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಲಭಿಸಿವೆ. ರಾಷ್ಟ್ರಪತಿ ಅವರು ಭೀಮವ್ವ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿದ್ದು, ಅಳಿವಿನ ಅಂಚಿನಲ್ಲಿರುವ ಇಂತಹ ಜಾನಪದ ಕಲೆಗಳ ಉಳಿವಿಗೆ ಪ್ರೋತ್ಸಾಹಿಸಿದಂತಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ದಿ ಹೇಳಿದಕ್ಕೆ ಮಗ ಸೂಸೈಡ್!

    May 30, 2025

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    May 30, 2025

    ಮೇಕೆ ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ..! ಗಂಭೀರ ಗಾಯ

    May 30, 2025

    ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು..!

    May 30, 2025

    ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಕೋಲಾರದಲ್ಲಿ ಕರವೇ ಪ್ರತಿಭಟನೆ!

    May 30, 2025

    ಕಂದಾಯ ಇಲಾಖೆ ಸಚಿವರು ನೋಡಲೇಬೇಕಾದ ಸುದ್ದಿ: AC, DC ಆದೇಶಗಳಿಗಿಲ್ಲ ಕವಡೆ ಕಾಸಿನ ಕಿಮ್ಮತ್ತು

    May 30, 2025

    ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ..!

    May 30, 2025

    ವ್ಯಾಪಕ ಮಳೆ: 100ರ ಗಡಿ ದಾಟಿದ ಕೆ.ಆರ್.ಎಸ್ ಡ್ಯಾಂ ನ ನೀರಿನ ಮಟ್ಟ.!

    May 30, 2025

    ಪೌರ ನೌಕರರ ಮುಷ್ಕರ: ಗಬ್ಬೆದ್ದು ನಾರುತ್ತಿರುವ ರಸ್ತೆಗಳು..!

    May 30, 2025

    ಗುಡ್ಡ ಕುಸಿತ ದುರಂತ: ಸಾವು ಗೆದ್ದ ತಾಯಿ: ಫಲಿಸಲೇ ಇಲ್ಲ ತಾಯಿಯ ಕರುಳಿನ ಕೂಗು – ಇಬ್ಬರು ಮಕ್ಕಳ ದುರ್ಮರಣ..!

    May 30, 2025

    ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು: ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಯು.ಟಿ ಖಾದರ್ ಸೂಚನೆ

    May 30, 2025

    ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ: ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು – ಗುಡ್ಡ ಕುಸಿದು ಮಗು ಸಾವು

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.