Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    DK Vs HDK: ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ: ಡಿಕೆಶಿ ಹೇಳಿದ್ದು ಯಾರಿಗೆ?!

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ.

    ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ.  ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.

    “ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು” ಎಂದು ಹೇಳಿದರು.

    “ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರ್ಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

    ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರು ಪ್ಲಾನ್ ಮಾಡುತ್ತಿದ್ದಾರೆ ಎಂಬ ಆರ್. ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮಾತನಾಡಲು ಆಗುವುದಿಲ್ಲ. ಅವರು ಅವರದೇ ಪಕ್ಷದ ವಕ್ತಾರರಾಗಿ ಅವರ ಪಕ್ಷವನ್ನು ಸರಿಪಡಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

    ಬೋಗಸ್ ಜನತಾ ದರ್ಶನ, ಸರ್ಕಾರ ಈಗ ಎಚ್ಚರವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ “ಹೊಸದಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೊಸದರಲ್ಲಿ ಜೋರಾಗಿ ಬಟ್ಟೆ ಒಗೆಯಲಿ. ನಾವು ಎಲ್ಲರ ಮನಸ್ಥಿತಿ ಅರಿಯುತ್ತಿದ್ದೇವೆ” ಎಂದು ಛೇಡಿಸಿದರು.

    ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂದು ಕೇಳಿದಾಗ “ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳುತ್ತದೆ ಎನ್ನುವ ಆರ್.ಅಶೋಕ ಅವರ ಆರೋಪದ ಬಗ್ಗೆ ಕೇಳಿದಾಗ “ಇನ್ನು ಸಮಯವಿದೆಯಲ್ಲ, ಮಾತನಾಡಲಿ ಬಿಡಿ” ಎಂದರು

    ಶಾಸಕ‌ ಬಾಲಕೃಷ್ಣರವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದಾಗ “ಆ ಬಗ್ಗೆ ವಿಚಾರಿಸಿಕೊಂಡು ಮಾತನಾಡುತ್ತೇನೆ” ಎಂದರು.

    ದೆಹಲಿ ಭೇಟಿ ವಿಚಾರವಾಗಿ ಕೇಳಿದಾಗ, “ನನ್ನ ವಕೀಲರಾಗಿದ್ದ ಸಿದ್ದಾರ್ಥ ಅವರ ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದು, ಅದನ್ನು ಮುಗಿಸಿ ಕರ್ನಾಟಕಕ್ಕೆ ಮರಳುತ್ತೇನೆ” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ!

    June 16, 2025

    ಯಲಹಂಕ ವಲಯದಲ್ಲಿ 12 ಕಟ್ಟಡಗಳ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಚರಣೆ: ಕರೀಗೌಡ!

    June 16, 2025

    ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!

    June 16, 2025

    ನೈಸರ್ಗಿಕ ಹಾಗೂ ಸಾವಯವ, ಕೃಷಿಗೆ ಸರ್ಕಾರದ ಪ್ರೋತ್ಸಾಹ: ಎನ್. ಚಲುವರಾಯಸ್ವಾಮಿ

    June 16, 2025

    ಇಸ್ರೇಲ್-ಇರಾನ್ ಯುದ್ಧ: ಈಗ ಚಿನ್ನ ಖರೀದಿ ಸೂಕ್ತವೇ? ಪರಿಷತ್ ಶಾಸಕ ಟಿ ಎ ಶರವಣ ಹೇಳಿದ್ದೇನು..?

    June 16, 2025

    ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ರವಿಕುಮಾರ್ ನೇತೃತ್ವದಲ್ಲಿ ವ್ಯಕ್ತಿ ವಿರುದ್ಧ ದೂರು ದಾಖಲು

    June 16, 2025

    ಹೊಸ ಜಾತಿಗಣತಿಗೆ ಸರ್ಕಾರ ನಿರ್ಧರಿಸಿದ ವಿಚಾರ: ಲಕ್ಷ್ಮಣ್ ಸವದಿ ಹೇಳಿದ್ದೇನು..?

    June 16, 2025

    ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಾಗೆ ನಾನು ಹೆಣಗಳ ಮೇಲೆ ರಾಜಕೀಯ ಮಾಡಲ್ಲ: ಡಿಕೆ ಶಿವಕುಮಾರ್

    June 16, 2025

    ಅಬಕಾರಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್: ಲೋಕಾಯುಕ್ತಕ್ಕೆ ವಕೀಲ ಹರಿಪ್ರಸಾದ್‌ ಕೊಟ್ಟ ದೂರಿನಲ್ಲೇನಿದೆ ?

    June 16, 2025

    Rapido ಚಾಲಕನಿಂದ ಯುವತಿ ಮೇಲೆ ಹಲ್ಲೆ..! ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ – video viral

    June 16, 2025

    ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ

    June 16, 2025

    ಶಾಶ್ವತ ಆದಾಯ.. ಹಸಿರು ಉದ್ಯಾನ.. ಹೀರೆಕಾಯಿ ಕೃಷಿಯಿಂದ ವರ್ಷಪೂರ್ತಿ ಲಾಭ…!

    June 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.