ಬೆಂಗಳೂರು:- ಯುಗಾದಿ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನಗರದಲ್ಲಿ ವಾಸಿಸುತ್ತಿರುವ ಜನ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.
ಮುಖ್ಯಮಂತ್ರಿ ಆಗಲು HDK ಭೇಟಿ ಆರೋಪ: GT ದೇವೇಗೌಡರಿಗೆ ಸತೀಶ್ ಜಾರಕಿಹೊಳಿ ಟಾಂಗ್!
ಯುಗಾದಿ ಮತ್ತು ರಂಜಾನ್ ಹಬ್ಬ ಒಟ್ಟಿಗೆ ಬಂದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಜನರು ಸ್ವಂತ ವಾಹನಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದರಿಂದ ಗೋವರ್ಧನ್ ಥಿಯೇಟರ್, ಗೊರಗುಂಟೆಪಾಳ್ಯ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.
ವಾಹನಗಳು ಸಾಲುಗಟ್ಟಿ ನಿಂತಿವೆ. ಸವಾರರು ಪರದಾಟ ನಡೆಸುತ್ತಿದ್ದಾರೆ.