ನವದೆಹಲಿ: ಭಾರತದ ಗ್ರಾಮಗಳ ಸಬಲೀಕರಣ ಪ್ರಯತ್ನಗಳಲ್ಲಿ ಪ್ರಮುಖವಾಗಿರುವ ‘ಸ್ವಾಮಿತ್ವ’ ಯೋಜನೆ ಅಡಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು 65 ಲಕ್ಷ ಕುಟುಂಬಗಳಿಗೆ ಆಸ್ತಿ ಕಾರ್ಡ್ ವಿತರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಯೋಜನೆ ಫಲಾನುಭವಿಗಳಿಗೆ ಕಾರ್ಡ್ ಹಂಚಿದ್ದಾರೆ.
ಇದು ಗ್ರಾಮೀಣ ಕುಟುಂಬಗಳಿಗೆ ಕಾನೂನುಬದ್ಧ ಆಸ್ತಿ ಹಕ್ಕುಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಮಾಲೀಕತ್ವದ ಮಹತ್ವವನ್ನು ಎತ್ತಿ ತೋರಿಸಿರುವ ಮೋದಿ ಬಡತನವನ್ನು ಕಡಿಮೆ ಮಾಡುವ ಮತ್ತು ಗ್ರಾಮಗಳನ್ನು ಬಲಪಡಿಸುವಲ್ಲಿ ಅದರ ಪಾತ್ರವನ್ನು ಒತ್ತಿ ಹೇಳಿದರು.
ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ಈ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಗ್ರಾಮಗಳ ಅಭಿವೃದ್ಧಿಯಲ್ಲಿ ಆಸ್ತಿ ಹಕ್ಕುಗಳ ಮಹತ್ವವನ್ನು ಒತ್ತಿ ಹೇಳಿದರು. “ಮಾಲೀಕತ್ವ ವ್ಯವಸ್ಥೆಗಳು ಗ್ರಾಮಗಳ ಅಭಿವೃದ್ಧಿಗೆ ಆಧಾರವಾಗಲಿವೆ” ಎಂದು ಅವರು ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಾತ್ಮ ಗಾಂಧಿಯವರ ಗ್ರಾಮೀಣಾಭಿವೃದ್ಧಿಯ ದೃಷ್ಟಿಕೋನವನ್ನು ಎತ್ತಿ ತೋರಿಸಿದ್ದಾರೆ.
ಗ್ರಾಮೀಣ ಆರ್ಥಿಕತೆಯನ್ನು ಆಧುನೀಕರಿಸುವ ಒಂದು ಹೆಜ್ಜೆಯಾಗಿ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವಲ್ಲಿ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಿಯವರು ಎತ್ತಿ ತೋರಿಸಿದರು. “ಕಳೆದ 7ರಿಂದ 8 ವರ್ಷಗಳಲ್ಲಿ ಸುಮಾರು ಶೇ. 98ರಷ್ಟು ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಭೂ ಆಧಾರ್ ಮೂಲಕ ಭೂಮಿಗೆ ವಿಶಿಷ್ಟ ಗುರುತನ್ನು ನೀಡಲಾಗಿದೆ. ಸುಮಾರು 23 ಕೋಟಿ ಭೂ ಆಧಾರ್ ಸಂಖ್ಯೆಗಳನ್ನು ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.