ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಆರ್ಎಸ್ ಸಂಸ್ಥಾಪಕ ಡಾ. ಕೇಶವ್ ಬಲಿರಾಮ್ ಹೆಗ್ಡೆವಾರ್ಗೆ ಪುಷ್ಪನಮನ ಸಲ್ಲಿಸಿದ್ದಾರೆ. ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರೇಶಿಮ್ ಭಾಗ್ನಲ್ಲಿರುವ ಸ್ಮೃತಿ ಮಂದಿರಕ್ಕೆ ಮೋದಿ ಭೇಟಿ ನೀಡಿ ಆರ್ಎಸ್ಎಸ್ ಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಹಾಗೂ ಎರಡನೇ ಸರಸಂಘ ಸಂಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಕೇಶವ್ ಬಲಿರಾಮ್ ಹೆಡಗೇವಾರ್ ಮತ್ತು ಗೋಲ್ವಾಲ್ಕರ್ ಸ್ಮಾರಕಗಳಿಗೆ ಗೌರವ ಸಲ್ಲಿಸಿದ ಬಳಿಕ ಮೋದಿ ಅವರು ಸಂದರ್ಶಕರ ಪುಸ್ತಕದಲ್ಲಿ ಹಿಂದಿಯಲ್ಲಿ ಸಂದೇಶ ಬರೆದರು. ಆರ್ಎಸ್ಎಸ್ನ ಎರಡು ಬಲವಾದ ಸ್ತಂಭಗಳ ಸ್ಮಾರಕವು ರಾಷ್ಟ್ರದ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಲಕ್ಷಾಂತರ ಸ್ವಯಂಸೇವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದು ಬರೆದಿದ್ದಾರೆ.
ನಾಗ್ಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಮುಖ್ಯಮಂತ್ರಿ ಫಡ್ನವೀಸ್, ನಿತಿನ್ ಗಡ್ಕರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಬರ ಮಾಡಿಕೊಂಡರು. ಸ್ಮೃತಿ ಭವನದಲ್ಲಿರುವ ಆರ್ಎಸ್ಎಸ್ನ ಕಚೇರಿ ಸಿಬ್ಬಂದಿಯನ್ನು ಮೋದಿ ಭೇಟಿಯಾಗಿ ಅವರೊಂದಿಗೆ ಫೋಟೊ ತೆಗೆಸಿಕೊಂಡರು.