ರಾಯಚೂರು:- ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ಗುರುರಾಯರ ದರ್ಶನ ಪಡೆದಿದ್ದಾರೆ.
ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ!
ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸಿದ ಅವರು, ರಥೋತ್ಸವದಲ್ಲಿ ಭಾಗವಹಿಸಿ ಹರಕೆ ತೀರಿಸಿದರು. ಉತ್ಸವರಾಯರ ಪಾದಪೂಜೆ, ಮಂಚಾಲಮ್ಮ ದೇವಿ ಪೂಜೆ, ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು
ಮಠದಲ್ಲಿ ಸಂಜೆ ನಡೆದ ಉತ್ಸವಗಳಲ್ಲಿ ಭಾಗವಹಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶಿರ್ವಚನ ಪಡೆದಿದ್ದಾರೆ.