ದೇವನಹಳ್ಳಿ:- ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಚಲೋ ಹಿನ್ನೆಲೆ ಇಂದು ಸಾಕಷ್ಟು ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್?
ನೂರಾರು ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ಕೈಬಿಡಲು ಪ್ರತಿಭಟನೆಕಾರರು ಪಟ್ಟುಬಿಡದ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ. ಪೊಲಿಸರ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆ ದೇವನಹಳ್ಳಿ ಪಟ್ಟಣ ರಣರಂಗವಾಗಿದೆ.
ಪೊಲಿಸರು- ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ:
ಇನ್ನೂ ರೈತರ ಪ್ರತಿಭಟನೆ ಹಿನ್ನೆಲೆ ಪೊಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಸಿಎಂ ಉತ್ತರ ನೀಡದೆ ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಬೆಂಗಳೂರು ಡಿಸಿಪಿ ಸುಜಿತ್ ಜೊತೆ ಹೋರಾಟಗಾರರು ಮಾತುಕತೆ ನಡೆಸಿದ್ದಾರೆ.
ಪ್ರತಿಭಟನೆ ವಾಪಸ್ ಪಡೆಯುವಂತೆ ಡಿಸಿಪಿ ಸುಜಿತ್ ಮನವಿ ಮಾಡಿದ್ದಾರೆ. ಆದರೆ ಹೋರಾಟಗಾರರು ಪಟ್ಟು ಬಿಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಉತ್ತರ ನೀಡುವವರೆಗೆ ಪ್ರತಿಭಟನೆ ಮುಂದುವರೆಯುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಸಮಾನ ಮನಸ್ಕರ ಜನಪರ ಸಂಘಟನೆಗಳಿಂದ ಹೋರಾಟ ನಡೆಯುತ್ತಿದೆ.