ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದೆ ಎನ್ನಲಾದ ಘರ್ಷಣೆಗಳಲ್ಲಿ ತಂದೆ-ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಿಂಸಾಚಾರ ಪೀಡಿತ ಸಂಸೇರ್ಗಂಜ್ ಪ್ರದೇಶದಲ್ಲಿರುವ ಜಾಫ್ರಾಬಾದ್ನಲ್ಲಿರುವ ಅವರ ಮನೆಯೊಳಗೆ ತಂದೆ-ಮಗ ಜೋಡಿಯಾದ ಹರೋಗೋಬಿಂದೋ ದಾಸ್ ಮತ್ತು ಚಂದನ್ ಅವರ ಮೃತದೇಹಗಳು ಬಹು ಇರಿತದ ಗಾಯಗಳಿಂದ ಪತ್ತೆಯಾಗಿವೆ ಎಂದು ಅವರು ಹೇಳಿದರು.
ಹೌದು ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರದಿಂದಾಗಿ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು,
ಸುತಿ, ಧುಲಿಯನ್, ಸಂಸರ್ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ ಹಿಂಸಾಚಾರ ಪೀಡಿತ ಮುರ್ಷಿದಾಬಾದ್ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ 5 ಕಂಪನಿಗಳನ್ನು ನಿಯೋಜಿಸಲಾಗಿದೆ.
ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಯಿತು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಯಿತು.