Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Kolar: ನಕಲಿ ದಾಖಲೆಗಳ ಸೃಷ್ಟಿ ಕ್ರಮಕ್ಕೆ ಆದಿಜಾಂಭವ ಸಂಘಟನೆಯಿಂದ ಪ್ರತಿಭಟನೆ

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಂಬುವಾರಪಲ್ಲಿ ಗ್ರಾಮದಲ್ಲಿನ ಸುಮಾರು 48 ಎಕರೆಯ ಊರ ಮಾದಿಗ ಇನಾಂತಿ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ದಲಿತರಿಗೆ ಮೋಸ ಮಾಡಿರುವ ಅಧಿಕಾರಿಗಳು ಹಾಗೂ ಪ್ರಭಾವಿ ಮುಖಂಡ ಜಿ.ಆರ್ ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಆದಿಜಾಂಭವ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

    ಸರಕಾರವು ಸುಮಾರು 75 ವರ್ಷಗಳ ಹಿಂದೆಯೇ ದಲಿತ ಕುಟುಂಬಗಳ ಅಭಿವೃದ್ಧಿಗಾಗಿ ಜಿಲ್ಲೆಯ ನೆಲವಂಕಿ ಹೋಬಳಿಯ ನಂಬುವಾರಪಲ್ಲಿ ಗ್ರಾಮದ ಸರ್ವೆ ನಂ 23, 26, 27, 28 ಹಾಗೂ 39 ರಲ್ಲಿ 48 ಎಕರೆ ಜಮೀನನ್ನು ತಾಲೂಕಿನ ಗ್ರಾಮದಲ್ಲಿ ಇನಾಂತಿ ನೌಕರರಿ ಮಾಡುವ ನಾಲ್ಕು ಕುಟುಂಬಗಳಿಗೆ ಸರಕಾರವೇ ನೀಡಿದ್ದಾರೆ ಈ ಜಾಗದಲ್ಲಿ ಅಂದಿನಿಂದ ವ್ಯವಸಾಯವನ್ನು ಮಾಡಿಕೊಂಡು ಜೀವನ ನಡೆಸುತ್ತಾ ಇದ್ದು ಈ ಜಮೀನಿಗೆ ಪ್ರಭಾವಗಳು ಕಣ್ಣು ಬಿದ್ದಿದ್ದು ದಲಿತರಿಗೆ ಮೋಸ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೊರವಿಮಾಕಲಹಳ್ಳಿಯ ಬಲಾಢ್ಯ ಸಮುದಾಯದ ಜಿ.ಆರ್ ಸುರೇಶ್ ಎಂಬುವವರು ಅಧಿಕಾರಿಗಳಿಗೆ ಲಂಚ ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಇವತ್ತು ನಮ್ಮಗಳ ಮೇಲೆ ದೌರ್ಜನ್ಯ ಮಾಡಲು ಮುಂದಾಗಿದ್ದಾರೆ ಕೇಳಿದರೆ ಪ್ರಾಣ ತೆಗೆಯುತ್ತೇನೆ ಎಂದು ರಾಜಾರೋಷವಾಗಿ ಬೆದರಿಕೆ ಹಾಕಿದ್ದಾರೆ ಹಣಬಲ ಮತ್ತು ರಾಜಕೀಯ ಬಲದಿಂದ ನಮ್ಮ ಜಮೀನನ್ನು ಕಳಬಳಿಸಲು ಮುಂದಾಗಿದ್ದು ಅವರ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

    ಈ ಸಂದರ್ಭದಲ್ಲಿ ಮಾದಿಗ ದಂಡೋರ ಜಿಲ್ಲಾ ಅಧ್ಯಕ್ಷ ಹೂಹಳ್ಳಿ ಕೃಷ್ಣಪ್ಪ ಮಾತನಾಡಿ ದಲಿತ ಜಮೀನು ಕಬಳಿಸಲು ಮುಂದಾಗಿರುವ ಜಿ.ಆರ್ ಸುರೇಶ್ ಸೃಷ್ಟಿಸಿರುವ ನಕಲಿ ದಾಖಲೆಗಳನ್ನು ರದ್ದು ಮಾಡಬೇಕು ಜೊತೆಗೆ ಅವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿದ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಜೊತೆಗೆ ಅ ಜಮೀನನ ನೈಜ ಪಲಾನುಭವಿಗಳಿ ಕುಟುಂಬಗಳಿಗೆ ಊರು ಮಾದಿಗ ಇನಾಂತಿ ಜಮೀನನ್ನು ಮರು ಮಂಜೂರು ಮಾಡಬೇಕು ಜೊತೆಗೆ ಅವರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರ್ ವಣಿಕ್ಯಾಳ್ ಮನವಿ ಸ್ವೀಕರಿಸಿ ಕೂಡಲೇ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದು ಪರಿಶೀಲನೆ ನಡೆಸಿ ನಿಮ್ಮ ಬೇಡಿಕೆ ಈಡೇರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಆದಿಜಾಂಭವ ಸಂಘಟನೆಯ ಮುಖಂಡರಾದ ಡಿ.ಶ್ರೀನಿವಾಸ್, ವೆಂಕಟೇಶ್, ಮಾದಿಗ ದಂಡೋರದ ರಾಜ್ಯ ಗೌರವ ಅಧ್ಯಕ್ಷ ಹಾರೋಹಳ್ಳಿ ಎಂ.ರವಿ, ಚನ್ನಸಂದ್ರ ಮುನಿರಾಜು, ಅಲೇರಿ ಮುನಿರಾಜು, ವೆಂಕಟರಮಣ, ತೂಪಲ್ಲಿ ಬಸವರಾಜ್, ದಿನ್ನೆ ಹೊಸಹಳ್ಳಿ ಅಂಜಿ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ, ಮುನಿಯಪ್ಪ, ಮುಂತಾದವರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು

    Demo
    Share. Facebook Twitter LinkedIn Email WhatsApp

    Related Posts

    ಕೋಲಾರ: ಮುಳಬಾಗಿಲು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ..!

    June 4, 2025

    ಬಾಲಾಜಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ನ್ಯೂರೋ ನೇವಿಗೇಶನ್ ಸಿಸ್ಟಂ ಅಳವಡಿಕೆ

    June 4, 2025

    ಕಳಸಾ – ಬಂಡೂರಿ ಹಾಗೂ ಮಲಪ್ರಭಾ ನದಿ ಜೋಡಣೆ ಹೋರಾಟ ಸಮಿತಿ ತೀವ್ರ ಖಂಡನೆ

    June 4, 2025

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ದಂಪತಿ ಸೇರಿ ಮೂವರು ಸ್ಥಳದಲ್ಲಿಯೇ ಸಾವು..!

    June 4, 2025

    ಬಸ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

    June 4, 2025

    RCB ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು..!

    June 4, 2025

    ಆರ್‌ಸಿಬಿಗೆ ರೋಚಕ ಜಯ: ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ!

    June 4, 2025

    ಚೊಚ್ಚಲ ಕಪ್ ಗೆದ್ದ ಆರ್ ಸಿಬಿ: ಮುಗಿಲು ಮುಟ್ಟಿದ ಗೆಲುವಿನ ಸಂಭ್ರಮ.. ಹುಚ್ಚೆದ್ದು ಕುಣಿದ ಫ್ಯಾನ್ಸ್!

    June 4, 2025

    ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅರೆಸ್ಟ್!

    June 3, 2025

    RCB Vs PBKS: ಪಟಾಕಿ ಸಿಡಿಸಿ ಆರ್.ಸಿ.ಬಿ ಅಭಿಮಾನಿಗಳ ಸಂಭ್ರಮ!

    June 3, 2025

    ಹುಬ್ಬಳ್ಳಿಯಲ್ಲಿ L&T ಅಧಿಕಾರಿಗಳ ಎಡವಟ್ಟು; ಒಬ್ಬ ಸಾವು ಇನ್ನೊಬ್ಬನ ಸ್ಥೀತಿ ಗಂಭೀರ!

    June 3, 2025

    ನಿರ್ಮಾಣ ಹಂತದಲ್ಲಿದ್ದ ಹೆಬ್ಬಾಗಿಲು ಕುಸಿದು ಓರ್ವ ಸಾವು..! ಮೂವರಿಗೆ ಗಾಯ

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.